ಹೊಸ ಕಟ್ಟಡ ಆಗಿರುವುದರಿಂದ ಕಾಲೇಜಿಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಹುದು. ಈ ಕಾಲೇಜು ಇಲ್ಲಿಯೇ ಉಳಿದರೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲ. ಸ್ಥಳಾಂತರ ಮಾಡಿದರೆ, ಕಾಲೇಜಿನಲ್ಲಿ ಈಗ ಓದುತ್ತಿರುವ ವಿದ್ಯಾರ್ಥಿಗಳು ದೂರದ ಊರಿಗೆ ಹೋಗಬೇಕಾಗುತ್ತದೆ. ಹಾಗಾಗಿ, ಪೋಷಕರು, ತೆರಕಣಾಂಬಿಯ ವರ್ತಕರು, ಸಾರ್ವಜನಿಕರು ಪ್ರತಿಭಟನೆಗೆ ಬೆಂಬಲ ನೀಡಬೇಕು ಎಂಬುದು ವಿದ್ಯಾರ್ಥಿಗಳ ಕೋರಿಕೆ.