ನಾಲ್ವರ ಪರ: ಎಂಟಿಬಿ ನಾಗರಾಜ್, ಅಡಗೂರು ಎಚ್. ವಿಶ್ವನಾಥ್, ರೋಶನ್ ಬೇಗ್ ಹಾಗೂ ಶಂಕರ್ ಅವರಿಗೆ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಈಡೇರಿಸಲಿದ್ದಾರೆ. ಇದೆಲ್ಲವೂ ಯಡಿಯೂರಪ್ಪ ಅವರ ಒಬ್ಬರ ಕೈಯಲ್ಲಿ ಇಲ್ಲ. ಪಕ್ಷದ ಕೋರ್ ಕಮಿಟಿಯಲ್ಲಿ ಚರ್ಚೆಯಾಗಿ, ನಂತರ ಉನ್ನತ ಮಟ್ಟದ ಸಮಿತಿಯಲ್ಲಿ ಚರ್ಚೆಯಾಗಿ ನಿರ್ಧಾರ ಕೈಗೊಳ್ಳಲಾಗುತ್ತದೆ. ನಾವು ನಾಲ್ಕೂ ಜನರ ಪರವಾಗಿದ್ದೇವೆ’ ಎಂದು ಸೋಮಶೇಖರ್ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.