<p><strong>ಮಹದೇಶ್ವರ ಬೆಟ್ಟ:</strong> ಹನೂರು ತಾಲ್ಲೂಕಿನ ಸುಳ್ವಾಡಿ ದೇವಸ್ಥಾನದಲ್ಲಿ ವಿಷಪ್ರಸಾದ ಸೇವಿಸಿ 17 ಜನರ ಸಾವಿಗೆ ಕಾರಣರಾಗಿರುವ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ನ್ಯಾಯಾಲಯ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಮೃತರ ಕುಟುಂಬ ಸದಸ್ಯರು ಸೋಮವಾರ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಮಹದೇಶ್ವರ ಬೆಟ್ಟದ ರಾಜಗೋಪುರ ಮುಂಭಾಗ ಜಮಾವಣೆಗೊಂಡ ಪ್ರತಿಭಟನಾಕಾರರು ಇಮ್ಮಡಿ ಮಹದೇವಸ್ವಾಮಿಯ ಜಾಮೀನು ರದ್ದುಗೊಳಿಸಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಇಮ್ಮಡಿ ಮಹದೇವಸ್ವಾಮಿ ವಿರುದ್ಧ ದಿಕ್ಕಾರ ಕೂಗುತ್ತಾ ಮೆರವಣಿಗೆಯ ಮೂಲಕ ಸಾಲೂರು ಮಠದ ಮುಂಭಾಗ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು.</p>.<p>ಇದೇವೇಳೆ ಮಾತನಾಡಿದ ಸಂತ್ರಸ್ತರು, ಕಿಡಿಗೇಡಿಗಳು ದೇವಸ್ಥಾನದ ಪ್ರಸಾದಕ್ಕೆ ವಿಷ ಹಾಕಿದ ಪರಿಣಾಮ 17 ಮಂದಿ ಅಮಾಯಕರು ಬಲಿಯಾಗಬೇಕಾಯಿತು. 120ಕ್ಕೂ ಹೆಚ್ಚು ಮಂದಿ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆ ಸೇರಬೇಕಾಯಿತು. ಬದುಕುಳಿದ ಹಲವರು ಇಂದಿಗೂ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ, ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.</p>.<p>ವೈಯಕ್ತಿಕ ಹಿತಾಸಕ್ತಿಗಾಗಿ ಭಕ್ತರ ಜೀವ ಬಲಿಪಡೆದ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.</p>.<p>ಇದೇವೇಳೆ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್ ಅವರಿಗೆ ಸಂತ್ರಸ್ತರು ಮನವಿ ಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ:</strong> ಹನೂರು ತಾಲ್ಲೂಕಿನ ಸುಳ್ವಾಡಿ ದೇವಸ್ಥಾನದಲ್ಲಿ ವಿಷಪ್ರಸಾದ ಸೇವಿಸಿ 17 ಜನರ ಸಾವಿಗೆ ಕಾರಣರಾಗಿರುವ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ನ್ಯಾಯಾಲಯ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಮೃತರ ಕುಟುಂಬ ಸದಸ್ಯರು ಸೋಮವಾರ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಮಹದೇಶ್ವರ ಬೆಟ್ಟದ ರಾಜಗೋಪುರ ಮುಂಭಾಗ ಜಮಾವಣೆಗೊಂಡ ಪ್ರತಿಭಟನಾಕಾರರು ಇಮ್ಮಡಿ ಮಹದೇವಸ್ವಾಮಿಯ ಜಾಮೀನು ರದ್ದುಗೊಳಿಸಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಇಮ್ಮಡಿ ಮಹದೇವಸ್ವಾಮಿ ವಿರುದ್ಧ ದಿಕ್ಕಾರ ಕೂಗುತ್ತಾ ಮೆರವಣಿಗೆಯ ಮೂಲಕ ಸಾಲೂರು ಮಠದ ಮುಂಭಾಗ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು.</p>.<p>ಇದೇವೇಳೆ ಮಾತನಾಡಿದ ಸಂತ್ರಸ್ತರು, ಕಿಡಿಗೇಡಿಗಳು ದೇವಸ್ಥಾನದ ಪ್ರಸಾದಕ್ಕೆ ವಿಷ ಹಾಕಿದ ಪರಿಣಾಮ 17 ಮಂದಿ ಅಮಾಯಕರು ಬಲಿಯಾಗಬೇಕಾಯಿತು. 120ಕ್ಕೂ ಹೆಚ್ಚು ಮಂದಿ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆ ಸೇರಬೇಕಾಯಿತು. ಬದುಕುಳಿದ ಹಲವರು ಇಂದಿಗೂ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ, ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.</p>.<p>ವೈಯಕ್ತಿಕ ಹಿತಾಸಕ್ತಿಗಾಗಿ ಭಕ್ತರ ಜೀವ ಬಲಿಪಡೆದ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.</p>.<p>ಇದೇವೇಳೆ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್ ಅವರಿಗೆ ಸಂತ್ರಸ್ತರು ಮನವಿ ಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>