ಆರೋಪಿಗಳಾದ ಇಮ್ಮಡಿ ಮಹಾದೇವಸ್ವಾಮಿ, ಅಂಬಿಕಾ, ಡೊಡ್ಡಯ್ಯ ಮತ್ತು ಮಾದೇಶ ಅವರ ನ್ಯಾಯಾಂಗ ಬಂಧನದ ಅವಧಿ ಬುಧವಾರಕ್ಕೆ ಮುಕ್ತಾಯವಾಗಿತ್ತು. ಹಾಗಾಗಿ, ಪೊಲೀಸರು ಅವರನ್ನು ಮೈಸೂರು ಕಾರಾಗೃಹದಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ. ಬಸವರಾಜ ಅವರ ಮುಂದೆ ಹಾಜರು ಪಡಿಸಿದರು.