ಆರೋಪಿಗಳ ಪರ ಯಾರೊಬ್ಬ ವಕೀಲರು ವಿಚಾರಣೆ ಸಂದರ್ಭದಲ್ಲಿ ಹಾಜರಿರಲಿಲ್ಲ. ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಅವರನ್ನು ಬಿಟ್ಟು ಉಳಿದ ಮೂವರು ಆರೋಪಿಗಳನ್ನು ಪ್ರಶ್ನಿಸಿದ ಜಿ.ಬಸವರಾಜ ಅವರು, ‘ನಿಮ್ಮ ಪರವಾಗಿ ವಕೀಲರನ್ನು ನೇಮಕ ಮಾಡಿಕೊಂಡಿದ್ದೀರಾ ಅಥವಾ ಸರ್ಕಾರಿ ವಕೀಲರನ್ನು ನೇಮಕ ಮಾಡಬೇಕಾ’ ಎಂದು ಕೇಳಿದರು.