ಚಾಮರಾಜನಗರ: ಹನೂರು ತಾಲ್ಲೂಕಿನಸುಳ್ವಾಡಿ ಮಾರಮ್ಮ ದೇವಾಲಯದಲ್ಲಿ ಸಂಭವಿಸಿದ ವಿಷ ಪ್ರಸಾದ ದುರಂತ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರುಮಂಗಳವಾರಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಬಸವರಾಜ ಅವರ ಮುಂದೆ ಹಾಜರುಪಡಿಸಿದರು.
ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ದೊಡ್ಡಯ್ಯ ಮತ್ತು ಮಾದೇಶ ಅವರ ಪರ ವಕೀಲರು ವಿಚಾರಣೆಗೆ ಬಂದಿರಲಿಲ್ಲ.
‘ವಕೀಲರನ್ನು ನೇಮಿಸಿಕೊಂಡಿದ್ದೀರಾ’ ಎಂದು ಆರೋಪಿಗಳನ್ನು ನ್ಯಾಯಾಧೀಶರು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸದೆ ಇದ್ದಾಗ,‘ಶೀಘ್ರವೇ ವಕೀಲರನ್ನು ನೇಮಿಸಿಕೊಳ್ಳಬೇಕು. ಇಲ್ಲದಿದ್ದರೆ ಸರ್ಕಾರಿ ವಕೀಲರನ್ನು ನೇಮಿಸಲಾಗುವುದು’ ಎಂದು ಹೇಳಿದ ಬಸವರಾಜ ಅವರು ವಿಚಾರಣೆಯನ್ನುಇದೇ 25ಕ್ಕೆ ಮುಂದೂಡಿದರು.