ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೃತಪಟ್ಟವರ ಕುಟುಂಬಗಳಿಗೆ ಎರಡು ಎಕರೆ ಜಮೀನು ನೀಡುವುದಾಗಿ ಹಿಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದ್ದರು. ಅದರಂತೆ ಜಿಲ್ಲಾಡಳಿತ ಕ್ರಮ ವಹಿಸಿದೆ. ಆ ಪ್ರದೇಶದಲ್ಲಿ ಸರ್ಕಾರಿ ಜಮೀನು ಇಲ್ಲದಿರುವುದರಿಂದ ಖಾಸಗಿಯವರಿಂದ ಖರೀದಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈಗ ಅವರು ಹೆಚ್ಚು ಬೆಲೆ ಹೇಳುತ್ತಿದ್ದಾರೆ’ ಎಂದರು.