ಕಾಡದ ಪ್ರೇಕ್ಷಕರ ಕೊರತೆ: ಕೋವಿಡ್ ಕಾರಣಕ್ಕೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಪ್ರಧಾನ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಭಾಂಗಣ ಪೂರ್ತಿ ಜನರಿದ್ದರು. ಶುಕ್ರವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಜನರು ಕಿಕ್ಕಿರಿದು ತುಂಬಿದ್ದರು. ಸಭಾಂಗಣ ಮಾತ್ರವಲ್ಲದೇ, ಹೊರಗಡೆಯೂ ನೂರಾರು ಮಂದಿ ನಿಂತುಕೊಂಡೇ ಕಾರ್ಯಕ್ರಮಗಳನ್ನು ವೀಕ್ಷಿಸಿದ್ದರು.