ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಹಾದುಹೋಗಿರುವ ಊಟಿ –ಮೈಸೂರು ಮುಖ್ಯರಸ್ತೆಯ (ರಾಷ್ಟ್ರೀಯ ಹೆದ್ದಾರಿ 67) ಇಕ್ಕೆಲಗಳಲ್ಲಿರುವ ಜಮೀನಿನಲ್ಲಿ ಅರಳಿ ನಿಂತಿರುವ ಸೂರ್ಯಕಾಂತಿ ಹೂವುಗಳ ಸೌಂದರ್ಯಕ್ಕೆ ವಾಹನ ಸವಾರರು ಮಾರು ಹೋಗುತ್ತಿದ್ದಾರೆ. ಜಮೀನಿಗೆ ಲಗ್ಗೆ ಇಟ್ಟು ಫೋಟೊ, ಸೆಲ್ಫಿ ತೆಗೆದುಕೊಂಡು ಸಂಭ್ರಮ ಪಡುತ್ತಿದ್ದಾರೆ.