<p><strong>ಮಹದೇಶ್ವರ ಬೆಟ್ಟ</strong>: ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ವ್ಯಾಪ್ತಿಯಲ್ಲಿ ಭಕ್ತರಿಗೆ ಅನುಕೂಲವಾಗುವಂತಹ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬೆಟ್ಟದ ನಾಗಮಲೆ ಭವನದಲ್ಲಿಗುರುವಾರಶ್ರೀಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಸಲಾಗುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾಸಭೆಯಲ್ಲಿ ಮಾತನಾಡಿದ ಅವರು, ‘ತ್ವರಿತವಾಗಿ ಪೂರ್ಣಗೊಳಿಸಿದರೆಉದ್ಘಾಟನೆಗೆ ಮುಖ್ಯಮಂತ್ರಿಯವರ ದಿನಾಂಕವನ್ನು ನಿಗದಿ ಮಾಡಲಾಗುವುದು’ ಎಂದರು.</p>.<p>‘ಮುಂಬರುವ ಶಿವರಾತ್ರಿ, ಮಹದೇಶ್ವರ ಜಾತ್ರೆ, ಯುಗಾದಿಗೆ ಭಕ್ತಾದಿಗಳು, ಸಾರ್ವಜನಿಕರಅನುಕೂಲಕ್ಕಾಗಿ ತುರ್ತಾಗಿ ಆಗಬೇಕಾದ ಅಭಿವೃದ್ಧಿ ಕೆಲಸಗಳು ಬೇಗ ಪೂರ್ಣಗೊಳಿಸಬೇಕು. ಕೈಗೆತ್ತಿಕೊಳ್ಳಲಾಗಿರುವ ವಸತಿ ಗೃಹ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಮುಗಿಸಬೇಕು.ಡಾರ್ಮಿಟರಿ ಹಾಗೂ ಇತರೆ ವಸತಿ ಗೃಹಗಳಿಗೆ ಅಗತ್ಯವಿರುವ ಪರಿಕರಗಳನ್ನು ಪೂರೈಸಬೇಕು’ ಎಂದರು</p>.<p class="Subhead">ಸ್ಥಳೀಯ ವ್ಯಾಪಾರಿಗಳನ್ನು ಪಟ್ಟಿಮಾಡಿ: ‘ಜಾತ್ರಾ ಸಂದರ್ಭದಲ್ಲಿ ಮಾತ್ರ ಇಲ್ಲಿಗೆ ಹೊರಗಿನಿಂದ ಬೀದಿಬದಿ ವ್ಯಾಪಾರಿಗಳು ಬರುತ್ತಾರೆ. ಇದರಿಂದ ಸ್ಥಳೀಯ ವ್ಯಾಪಾರಿಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ, ಗ್ರಾಮ ಪಂಚಾಯಿತಿ, ಸಂಘದ ಸಹಾಯ ಪಡೆದು ಸ್ಥಳೀಯ ವ್ಯಾಪಾರಿಗಳನ್ನು ಪಟ್ಟಿಮಾಡಿ’ ಎಂದು ಶಾಸಕ ಆರ್. ನರೇಂದ್ರ ಸೂಚಿಸಿದರು.</p>.<p>ಮೆಟ್ಟಿಲಿಗೆ ಸಾಮಾನ್ಯ ಕಲ್ಲು: ಪಾದಯಾತ್ರೆಯಲ್ಲಿ ಬರುವ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ನಿರ್ಮಿಸಲು ಉದ್ದೇಶಿಸಿರುವ ಮೆಟ್ಟಿಲುಗಳಿಗೆ ಗ್ರಾನೈಟ್ ಬಳಸುವುದು ಬೇಡ. ನೈಸರ್ಗಿಕ ಕಲ್ಲನ್ನೇ ಬಳಸಬೇಕು ಎಂದು ನರೇಂದ್ರ ಹಾಗೂ ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್ ಏಡುಕುಂಡಲು ಸಲಹೆ ನೀಡಿದರು.</p>.<p class="Subhead">20 ದಿನಗಳಲ್ಲಿ ಟವರ್:‘ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗಿನ 17 ಕಿ.ಮೀ ರಸ್ತೆ ಹಾಗೂ ಬೆಟ್ಟದಿಂದ ಪಾಲಾರ್ವರೆಗೆ ತುರ್ತಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚಿಸಲಾಗಿದೆ. ಮಹದೇಶ್ವರ ಬೆಟ್ಟದಲ್ಲಿ ಮೊಬೈಲ್ಸಂಪರ್ಕ ಸಿಗದಿರುವುದು ಸಮಸ್ಯೆಯಾಗಿದೆ. ಈ ಬಗ್ಗೆ ಬಿಎಸ್ಎನ್ಎಲ್ ಅಧಿಕಾರಿಗಳೊಂದಿಗೆ ಚರ್ಚಿಸಿ ಅನುಮತಿ ಪತ್ರ ನೀಡಿ 20 ದಿನಗಳಲ್ಲಿ ಮೊಬೈಲ್ ಟವರ್ ಹಾಕಲು ಸೂಚಿಸಿದೆ. ಜೊತೆಗೆ ಖಾಸಗಿ ಸಂಸ್ಥೆಗಳು ಕೂಡ ಪ್ರಮುಖ ದಿನದಲ್ಲಿ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ’ ಎಂದು ಸುರೇಶ್ ಕುಮಾರ್ ಹೇಳಿದರು.</p>.<p>ದೀಪದ ಒಡ್ಡುವಿನಲ್ಲಿ ನಿರ್ಮಾಣ ಮಾಡಲಿರುವ ಮಹದೇಶ್ವರರ100 ಅಡಿಪ್ರತಿಮೆ ಕೆಲಸದ ಸಂಪೂರ್ಣ ಮಾಹಿತಿಯನ್ನು ಪವರ್ ಪಾಯಿಂಟ್ ಪ್ರದರ್ಶನದ ಮೂಲಕ ವೀಕ್ಷಿಸಿದ ಸಚಿವರು, ಪ್ರತಿಮೆ ನಿರ್ಮಾಣಕ್ಕಾಗಿ ಅಗತ್ಯ ಸ್ಥಳ ಹಸ್ತಾಂತರ ಪ್ರಕ್ರಿಯೆ ಸೇರಿದಂತೆ ಇತರೆ ಕೆಲಸಗಳನ್ನು ಶೀಘ್ರ ನಿರ್ವಹಿಸಲು ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದರು.</p>.<p>ಒಳ ಚರಂಡಿ ಕಾಮಗಾರಿ, ವೈದ್ಯಕೀಯ ವ್ಯವಸ್ಥೆ, ಬಂದೋಬಸ್ತ್, ವಾಹನ ನಿಲುಗಡೆ, ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಅಗ್ನಿಶಾಮಕ ದಳ ನಿಯೋಜನೆ ಸೇರಿದಂತೆ ಜಾತ್ರಾ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.</p>.<p>ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಚ್. ನಾರಾಯಣರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್ ಕುಮಾರ್, ಕ್ಷೇತ್ರ ಅಭಿವೃದ್ಧಿಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ, ಉಪವಿಭಾಗಾಧಿಕಾರಿ ನಿಖಿತಾ ಚಿನ್ನಸ್ವಾಮಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸುರೇಂದ್ರ ಇದ್ದರು.</p>.<p class="Briefhead"><strong>ಕಾಮಗಾರಿಗಳ ಪರಿಶೀಲನೆ</strong></p>.<p>ಇದಕ್ಕೂ ಮುನ್ನ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜಾತ್ರಾ ಸಿದ್ಧತಾ ಕಾರ್ಯಗಳನ್ನು ಸಚಿವರು ವೀಕ್ಷಿಸಿದರು.</p>.<p>90ಲಕ್ಷ ಲೀಟರ್ ಸಾಮರ್ಥ್ಯದ ನೆಲ ಮಟ್ಟದ ಜಲ ಸಂಗ್ರಹಾಗಾರದಲ್ಲಿನೀರು ಪೂರೈಕೆ, ಸಂಗ್ರಹ, ಎಷ್ಟು ಜನರಿಗೆ ನೀರು ತಲುಪಿಸಬಹುದು ಎಂಬ ಮಾಹಿತಿ ಪಡೆದರು. ಬಳಿಕ ನೀರು ಶುದ್ಧೀಕರಣ ಘಟಕ,ದೀಪದ ಗಿರಿ ಓಡ್ಡುವಿನಲ್ಲಿ ಮಹದೇಶ್ವರರ100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲು ಗುರುತಿಸಿರುವ ಸ್ಥಳಕ್ಕೆ ಭೇಟಿ ನೀಡಿದರು.</p>.<p>ಬಳಿಕದೇವರ ದರ್ಶನ ಪಡೆದು, ಲಾಡು ತಯಾರಿಕಾ ಕೇಂದ್ರ,ದಾಸೋಹ ಭವನ, ಅಂತರಗಂಗೆ ಬಳಿ ನಿರ್ಮಾಣ ಮಾಡಲಾಗಿರುವ ಕಲ್ಯಾಣಿ ಕಾಮಗಾರಿ ಪರಿಶೀಲಿಸಿದರು.</p>.<p>ಭಕ್ತಾದಿಗಳ ವಾಸ್ತವ್ಯಕ್ಕೆ ನಿರ್ಮಿಸಿರುವ ಡಾರ್ಮಿಟರಿ ಕಟ್ಟಡ. ಜೇನುಮಲೆ ವಸತಿ ಗೃಹ ಹಾಗೂ ನಿರ್ಮಾಣ ಹಂತದಲ್ಲಿರುವ512 ಕೊಠಡಿಗಳ ಅತಿಥಿ ಗೃಹ ಕಾಮಗಾರಿಯನ್ನು ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ</strong>: ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ವ್ಯಾಪ್ತಿಯಲ್ಲಿ ಭಕ್ತರಿಗೆ ಅನುಕೂಲವಾಗುವಂತಹ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬೆಟ್ಟದ ನಾಗಮಲೆ ಭವನದಲ್ಲಿಗುರುವಾರಶ್ರೀಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಸಲಾಗುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾಸಭೆಯಲ್ಲಿ ಮಾತನಾಡಿದ ಅವರು, ‘ತ್ವರಿತವಾಗಿ ಪೂರ್ಣಗೊಳಿಸಿದರೆಉದ್ಘಾಟನೆಗೆ ಮುಖ್ಯಮಂತ್ರಿಯವರ ದಿನಾಂಕವನ್ನು ನಿಗದಿ ಮಾಡಲಾಗುವುದು’ ಎಂದರು.</p>.<p>‘ಮುಂಬರುವ ಶಿವರಾತ್ರಿ, ಮಹದೇಶ್ವರ ಜಾತ್ರೆ, ಯುಗಾದಿಗೆ ಭಕ್ತಾದಿಗಳು, ಸಾರ್ವಜನಿಕರಅನುಕೂಲಕ್ಕಾಗಿ ತುರ್ತಾಗಿ ಆಗಬೇಕಾದ ಅಭಿವೃದ್ಧಿ ಕೆಲಸಗಳು ಬೇಗ ಪೂರ್ಣಗೊಳಿಸಬೇಕು. ಕೈಗೆತ್ತಿಕೊಳ್ಳಲಾಗಿರುವ ವಸತಿ ಗೃಹ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಮುಗಿಸಬೇಕು.ಡಾರ್ಮಿಟರಿ ಹಾಗೂ ಇತರೆ ವಸತಿ ಗೃಹಗಳಿಗೆ ಅಗತ್ಯವಿರುವ ಪರಿಕರಗಳನ್ನು ಪೂರೈಸಬೇಕು’ ಎಂದರು</p>.<p class="Subhead">ಸ್ಥಳೀಯ ವ್ಯಾಪಾರಿಗಳನ್ನು ಪಟ್ಟಿಮಾಡಿ: ‘ಜಾತ್ರಾ ಸಂದರ್ಭದಲ್ಲಿ ಮಾತ್ರ ಇಲ್ಲಿಗೆ ಹೊರಗಿನಿಂದ ಬೀದಿಬದಿ ವ್ಯಾಪಾರಿಗಳು ಬರುತ್ತಾರೆ. ಇದರಿಂದ ಸ್ಥಳೀಯ ವ್ಯಾಪಾರಿಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ, ಗ್ರಾಮ ಪಂಚಾಯಿತಿ, ಸಂಘದ ಸಹಾಯ ಪಡೆದು ಸ್ಥಳೀಯ ವ್ಯಾಪಾರಿಗಳನ್ನು ಪಟ್ಟಿಮಾಡಿ’ ಎಂದು ಶಾಸಕ ಆರ್. ನರೇಂದ್ರ ಸೂಚಿಸಿದರು.</p>.<p>ಮೆಟ್ಟಿಲಿಗೆ ಸಾಮಾನ್ಯ ಕಲ್ಲು: ಪಾದಯಾತ್ರೆಯಲ್ಲಿ ಬರುವ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ನಿರ್ಮಿಸಲು ಉದ್ದೇಶಿಸಿರುವ ಮೆಟ್ಟಿಲುಗಳಿಗೆ ಗ್ರಾನೈಟ್ ಬಳಸುವುದು ಬೇಡ. ನೈಸರ್ಗಿಕ ಕಲ್ಲನ್ನೇ ಬಳಸಬೇಕು ಎಂದು ನರೇಂದ್ರ ಹಾಗೂ ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್ ಏಡುಕುಂಡಲು ಸಲಹೆ ನೀಡಿದರು.</p>.<p class="Subhead">20 ದಿನಗಳಲ್ಲಿ ಟವರ್:‘ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗಿನ 17 ಕಿ.ಮೀ ರಸ್ತೆ ಹಾಗೂ ಬೆಟ್ಟದಿಂದ ಪಾಲಾರ್ವರೆಗೆ ತುರ್ತಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚಿಸಲಾಗಿದೆ. ಮಹದೇಶ್ವರ ಬೆಟ್ಟದಲ್ಲಿ ಮೊಬೈಲ್ಸಂಪರ್ಕ ಸಿಗದಿರುವುದು ಸಮಸ್ಯೆಯಾಗಿದೆ. ಈ ಬಗ್ಗೆ ಬಿಎಸ್ಎನ್ಎಲ್ ಅಧಿಕಾರಿಗಳೊಂದಿಗೆ ಚರ್ಚಿಸಿ ಅನುಮತಿ ಪತ್ರ ನೀಡಿ 20 ದಿನಗಳಲ್ಲಿ ಮೊಬೈಲ್ ಟವರ್ ಹಾಕಲು ಸೂಚಿಸಿದೆ. ಜೊತೆಗೆ ಖಾಸಗಿ ಸಂಸ್ಥೆಗಳು ಕೂಡ ಪ್ರಮುಖ ದಿನದಲ್ಲಿ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ’ ಎಂದು ಸುರೇಶ್ ಕುಮಾರ್ ಹೇಳಿದರು.</p>.<p>ದೀಪದ ಒಡ್ಡುವಿನಲ್ಲಿ ನಿರ್ಮಾಣ ಮಾಡಲಿರುವ ಮಹದೇಶ್ವರರ100 ಅಡಿಪ್ರತಿಮೆ ಕೆಲಸದ ಸಂಪೂರ್ಣ ಮಾಹಿತಿಯನ್ನು ಪವರ್ ಪಾಯಿಂಟ್ ಪ್ರದರ್ಶನದ ಮೂಲಕ ವೀಕ್ಷಿಸಿದ ಸಚಿವರು, ಪ್ರತಿಮೆ ನಿರ್ಮಾಣಕ್ಕಾಗಿ ಅಗತ್ಯ ಸ್ಥಳ ಹಸ್ತಾಂತರ ಪ್ರಕ್ರಿಯೆ ಸೇರಿದಂತೆ ಇತರೆ ಕೆಲಸಗಳನ್ನು ಶೀಘ್ರ ನಿರ್ವಹಿಸಲು ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದರು.</p>.<p>ಒಳ ಚರಂಡಿ ಕಾಮಗಾರಿ, ವೈದ್ಯಕೀಯ ವ್ಯವಸ್ಥೆ, ಬಂದೋಬಸ್ತ್, ವಾಹನ ನಿಲುಗಡೆ, ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಅಗ್ನಿಶಾಮಕ ದಳ ನಿಯೋಜನೆ ಸೇರಿದಂತೆ ಜಾತ್ರಾ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.</p>.<p>ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಚ್. ನಾರಾಯಣರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್ ಕುಮಾರ್, ಕ್ಷೇತ್ರ ಅಭಿವೃದ್ಧಿಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ, ಉಪವಿಭಾಗಾಧಿಕಾರಿ ನಿಖಿತಾ ಚಿನ್ನಸ್ವಾಮಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸುರೇಂದ್ರ ಇದ್ದರು.</p>.<p class="Briefhead"><strong>ಕಾಮಗಾರಿಗಳ ಪರಿಶೀಲನೆ</strong></p>.<p>ಇದಕ್ಕೂ ಮುನ್ನ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜಾತ್ರಾ ಸಿದ್ಧತಾ ಕಾರ್ಯಗಳನ್ನು ಸಚಿವರು ವೀಕ್ಷಿಸಿದರು.</p>.<p>90ಲಕ್ಷ ಲೀಟರ್ ಸಾಮರ್ಥ್ಯದ ನೆಲ ಮಟ್ಟದ ಜಲ ಸಂಗ್ರಹಾಗಾರದಲ್ಲಿನೀರು ಪೂರೈಕೆ, ಸಂಗ್ರಹ, ಎಷ್ಟು ಜನರಿಗೆ ನೀರು ತಲುಪಿಸಬಹುದು ಎಂಬ ಮಾಹಿತಿ ಪಡೆದರು. ಬಳಿಕ ನೀರು ಶುದ್ಧೀಕರಣ ಘಟಕ,ದೀಪದ ಗಿರಿ ಓಡ್ಡುವಿನಲ್ಲಿ ಮಹದೇಶ್ವರರ100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲು ಗುರುತಿಸಿರುವ ಸ್ಥಳಕ್ಕೆ ಭೇಟಿ ನೀಡಿದರು.</p>.<p>ಬಳಿಕದೇವರ ದರ್ಶನ ಪಡೆದು, ಲಾಡು ತಯಾರಿಕಾ ಕೇಂದ್ರ,ದಾಸೋಹ ಭವನ, ಅಂತರಗಂಗೆ ಬಳಿ ನಿರ್ಮಾಣ ಮಾಡಲಾಗಿರುವ ಕಲ್ಯಾಣಿ ಕಾಮಗಾರಿ ಪರಿಶೀಲಿಸಿದರು.</p>.<p>ಭಕ್ತಾದಿಗಳ ವಾಸ್ತವ್ಯಕ್ಕೆ ನಿರ್ಮಿಸಿರುವ ಡಾರ್ಮಿಟರಿ ಕಟ್ಟಡ. ಜೇನುಮಲೆ ವಸತಿ ಗೃಹ ಹಾಗೂ ನಿರ್ಮಾಣ ಹಂತದಲ್ಲಿರುವ512 ಕೊಠಡಿಗಳ ಅತಿಥಿ ಗೃಹ ಕಾಮಗಾರಿಯನ್ನು ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>