ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ರಮ ನೇಮಕಾತಿಯ ವಿರುದ್ಧ ವಿವಿಧ ಸಂಘಟನೆಗಳು ಒಟ್ಟಾಗಿ ಐದಾರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿವೆ. ನಿರಂತರ ಹೋರಾಟ ಮಾಡಿದ ನಂತರ, ಅಂದಿನ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ತನಿಖೆಗಾಗಿ ನಾಲ್ವರ ತಂಡ ರಚಿಸಿದ್ದರು. ತಂಡವು 320 ಪುಟಗಳ ತನಿಖಾ ವರದಿಯನ್ನು ನೀಡಿದೆ. ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ನೀಡಿದೆ. ಆದರೆ, ಇದುವರೆಗೆ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ’ ಎಂದು ಆರೋಪಿಸಿದರು.