<p><strong>ಯಳಂದೂರು:</strong> ತಾಲ್ಲೂಕಿನ ಸುತ್ತಮುತ್ತ ಭಾನುವಾರ ‘ತೌತೆ’ ಚಂಡಮಾರುತದ ಪ್ರಭಾವದಿಂದ ತುಂತುರು ಮಳೆಯ ಜೊತೆಗೆ ಚಳಿಗಾಳಿ ಬೀಸಿತು.</p>.<p>ಬಿಳಿಗಿರಿರಂಗನಬೆಟ್ಟದಲ್ಲಿ ಶನಿವಾರ ರಾತ್ರಿ ಮಂಜು ಆವರಿಸಿತ್ತು. ಮೈಕೊರೆಯುವ ಚಳಿಯ ಅನುಭವವೂ ಆಯಿತು.</p>.<p>ಮೂಂಜಾನೆ ಬೀಸಿದ ಗಾಳಿಯ ರಭಸಕ್ಕೆ ಕೆಲ ತೋಟಗಳಲ್ಲಿ ಮಾವಿನ ಕಾಯಿಗಳು ಉದುರಿದವು. ಆದರೆ, ನಿಧಾನಕ್ಕೆ ಬಿಸಿಲು ಕಾಣಿಸಿಕೊಂಡು ಆತಂಕ ದೂರ ಮಾಡಿತು ಎಂದು ಅಂಬಳೆ ಕೃಷಿಕ ಪ್ರದೀಪ್ ಹೇಳಿದರು.</p>.<p>ಕೃಷಿಕರು ಬಿತ್ತನೆ ತಾಕುಗಳನ್ನು ಸಿದ್ಧತೆ ಮಾಡುತ್ತಿದ್ದಾರೆ. ದ್ವಿದಳ ಧಾನ್ಯ, ಬಾಳೆ, ಕಬ್ಬು ನಾಟಿಗೆ ಹೆಚ್ಚಿನ ಒಲವು ತೋರಿದ್ದು, ಲಾಕ್ಡೌನ್ ಅವಧಿಯಲ್ಲಿ ಬಿತ್ತನೆ ಬೀಜ ಕೊಳ್ಳುವವರ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಎ. ವೆಂಕಟರಂಗ ಶೆಟ್ಟಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು:</strong> ತಾಲ್ಲೂಕಿನ ಸುತ್ತಮುತ್ತ ಭಾನುವಾರ ‘ತೌತೆ’ ಚಂಡಮಾರುತದ ಪ್ರಭಾವದಿಂದ ತುಂತುರು ಮಳೆಯ ಜೊತೆಗೆ ಚಳಿಗಾಳಿ ಬೀಸಿತು.</p>.<p>ಬಿಳಿಗಿರಿರಂಗನಬೆಟ್ಟದಲ್ಲಿ ಶನಿವಾರ ರಾತ್ರಿ ಮಂಜು ಆವರಿಸಿತ್ತು. ಮೈಕೊರೆಯುವ ಚಳಿಯ ಅನುಭವವೂ ಆಯಿತು.</p>.<p>ಮೂಂಜಾನೆ ಬೀಸಿದ ಗಾಳಿಯ ರಭಸಕ್ಕೆ ಕೆಲ ತೋಟಗಳಲ್ಲಿ ಮಾವಿನ ಕಾಯಿಗಳು ಉದುರಿದವು. ಆದರೆ, ನಿಧಾನಕ್ಕೆ ಬಿಸಿಲು ಕಾಣಿಸಿಕೊಂಡು ಆತಂಕ ದೂರ ಮಾಡಿತು ಎಂದು ಅಂಬಳೆ ಕೃಷಿಕ ಪ್ರದೀಪ್ ಹೇಳಿದರು.</p>.<p>ಕೃಷಿಕರು ಬಿತ್ತನೆ ತಾಕುಗಳನ್ನು ಸಿದ್ಧತೆ ಮಾಡುತ್ತಿದ್ದಾರೆ. ದ್ವಿದಳ ಧಾನ್ಯ, ಬಾಳೆ, ಕಬ್ಬು ನಾಟಿಗೆ ಹೆಚ್ಚಿನ ಒಲವು ತೋರಿದ್ದು, ಲಾಕ್ಡೌನ್ ಅವಧಿಯಲ್ಲಿ ಬಿತ್ತನೆ ಬೀಜ ಕೊಳ್ಳುವವರ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಎ. ವೆಂಕಟರಂಗ ಶೆಟ್ಟಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>