ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತೌತೆ’ ಚಂಡಮಾರುತದ ಗಾಳಿಗೆ ಉದುರಿದ ಮಾವು

Last Updated 17 ಮೇ 2021, 3:08 IST
ಅಕ್ಷರ ಗಾತ್ರ

ಯಳಂದೂರು: ತಾಲ್ಲೂಕಿನ ಸುತ್ತಮುತ್ತ ಭಾನುವಾರ ‘ತೌತೆ’ ಚಂಡಮಾರುತದ ಪ್ರಭಾವದಿಂದ ತುಂತುರು ಮಳೆಯ ಜೊತೆಗೆ ಚಳಿಗಾಳಿ ಬೀಸಿತು.

ಬಿಳಿಗಿರಿರಂಗನಬೆಟ್ಟದಲ್ಲಿ ಶನಿವಾರ ರಾತ್ರಿ ಮಂಜು ಆವರಿಸಿತ್ತು. ಮೈಕೊರೆಯುವ ಚಳಿಯ ಅನುಭವವೂ ಆಯಿತು.

ಮೂಂಜಾನೆ ಬೀಸಿದ ಗಾಳಿಯ ರಭಸಕ್ಕೆ ಕೆಲ ತೋಟಗಳಲ್ಲಿ ಮಾವಿನ ಕಾಯಿಗಳು ಉದುರಿದವು. ಆದರೆ, ನಿಧಾನಕ್ಕೆ ಬಿಸಿಲು ಕಾಣಿಸಿಕೊಂಡು ಆತಂಕ ದೂರ ಮಾಡಿತು ಎಂದು ಅಂಬಳೆ ಕೃಷಿಕ ಪ್ರದೀಪ್ ಹೇಳಿದರು.

ಕೃಷಿಕರು ಬಿತ್ತನೆ ತಾಕುಗಳನ್ನು ಸಿದ್ಧತೆ ಮಾಡುತ್ತಿದ್ದಾರೆ. ದ್ವಿದಳ ಧಾನ್ಯ, ಬಾಳೆ, ಕಬ್ಬು ನಾಟಿಗೆ ಹೆಚ್ಚಿನ ಒಲವು ತೋರಿದ್ದು, ಲಾಕ್‌ಡೌನ್ ಅವಧಿಯಲ್ಲಿ ಬಿತ್ತನೆ ಬೀಜ ಕೊಳ್ಳುವವರ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಎ. ವೆಂಕಟರಂಗ ಶೆಟ್ಟಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT