ಸಿಮ್ಸ್ ಪ್ರಾಂಶುಪಾಲ ಡಾ. ಗಿರೀಶ್ ವಿ. ಪಾಟೀಲ ಮಾತನಾಡಿ, ‘ಶಿಕ್ಷಣ ಕ್ಷೇತ್ರಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕರಿಗೆ ಆದರ್ಶವಾಗಿದ್ದಾರೆ. ಹೀಗಾಗಿ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ. ಉತ್ತಮ ಶಿಕ್ಷಕರು ವಿದ್ಯಾರ್ಥಿಗಳಿಗೆ ನೈತಿಕತೆ, ಆತ್ಮವಿಶ್ವಾಸ, ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವ ಮನೋಧೋರಣೆಯನ್ನು ಬೆಳೆಸುತ್ತಾರೆ ಎಂದರು.