<p><strong>ಯಳಂದೂರು</strong>: ತಾಲ್ಲೂಕಿನ ಕೆಸ್ತೂರು, ಹೊನ್ನೂರು, ಮದ್ದೂರು, ಮಾಂಬಳ್ಳಿ, ಯರಿಯೂರು, ಯರಗಂಬಳ್ಳಿ ಹಾಗೂ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಶಾಲಾ ಆರಂಭೋತ್ಸವ ಅದ್ದೂರಿಯಾಗಿ ನಡೆಯಿತು. ಮಕ್ಕಳು ಸಡಗರ ಸಂಭ್ರಮಗಳ ನಡುವೆ ಹೊಸ ಧಿರಿಸು ತೊಟ್ಟು, ನಲಿಯುತ, ಕುಣಿಯುತ ಶಾಲೆಯತ್ತ ಬಂದರು.</p>.<p>ಮುಖ್ಯೋಪಾಧ್ಯಾಯ ಸಿದ್ದರಾಜು ಮಾತನಾಡಿ, ‘ಶಾಲೆಯ ವಿದ್ಯಾರ್ಥಿಗಳನ್ನು ಎತ್ತಿನಗಾಡಿ ಮತ್ತು ವಾಹನಗಳಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು. ಹಿರಿಯ ವಿದ್ಯಾರ್ಥಿಗಳು ಕಳಸ ಹೊತ್ತು ಸಾಗಿದರು. ಈ ಸಮಯ ಮಂಗಳವಾದ್ಯ, ತಮಟೆ ಬ್ಯಾಂಡ್ ಬಾರಿಸಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವಂತೆ ಘೋಷಣೆ ಕೂಗಲಾಯಿತು’ ಎಂದರು.</p>.<p>ಗ್ರಾಮೀಣ ಶಾಲೆಗಳ ಮುಂಭಾಗ ಶಿಕ್ಷಕಿಯರು ಬಣ್ಣದ ರಂಗೋಲಿ ಇಟ್ಟರೆ, ಶಿಕ್ಷಕರು ತಳಿರು ತೋರಣಗಳ ಸಿಂಗಾರ ಮಾಡಿ, ಹಬ್ಬದ ವಾತಾವರಣ ನಿರ್ಮಿಸಿದರು. ಮಕ್ಕಳಿಗೆ ಹೂ ಗುಚ್ಛ ನೀಡಿ ಸರಸ್ವತಿ ಪೂಜೆ ಮಾಡಿ ಸಹಿಯೂಟ ಬಡಿಸಲಾಯಿತು. ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಯಿತು.</p>.<p>ಎಸ್ಡಿಎಂಸಿ ಅಧ್ಯಕ್ಷ ಚಿನ್ನಸ್ವಾಮಿ, ಉಪಾಧ್ಯಕ್ಷೆ ಸಂಗೀತ, ಸದಸ್ಯರಾದ ರಾಜ, ಕಾವ್ಯ, ಶಿಕ್ಷಕರಾದ ನಂಜಯ್ಯ, ರಾಜೇಶ್, ಮಾಲಾವತಿ ಹಾಗೂ ಜಯಶ್ರೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು</strong>: ತಾಲ್ಲೂಕಿನ ಕೆಸ್ತೂರು, ಹೊನ್ನೂರು, ಮದ್ದೂರು, ಮಾಂಬಳ್ಳಿ, ಯರಿಯೂರು, ಯರಗಂಬಳ್ಳಿ ಹಾಗೂ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಶಾಲಾ ಆರಂಭೋತ್ಸವ ಅದ್ದೂರಿಯಾಗಿ ನಡೆಯಿತು. ಮಕ್ಕಳು ಸಡಗರ ಸಂಭ್ರಮಗಳ ನಡುವೆ ಹೊಸ ಧಿರಿಸು ತೊಟ್ಟು, ನಲಿಯುತ, ಕುಣಿಯುತ ಶಾಲೆಯತ್ತ ಬಂದರು.</p>.<p>ಮುಖ್ಯೋಪಾಧ್ಯಾಯ ಸಿದ್ದರಾಜು ಮಾತನಾಡಿ, ‘ಶಾಲೆಯ ವಿದ್ಯಾರ್ಥಿಗಳನ್ನು ಎತ್ತಿನಗಾಡಿ ಮತ್ತು ವಾಹನಗಳಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು. ಹಿರಿಯ ವಿದ್ಯಾರ್ಥಿಗಳು ಕಳಸ ಹೊತ್ತು ಸಾಗಿದರು. ಈ ಸಮಯ ಮಂಗಳವಾದ್ಯ, ತಮಟೆ ಬ್ಯಾಂಡ್ ಬಾರಿಸಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವಂತೆ ಘೋಷಣೆ ಕೂಗಲಾಯಿತು’ ಎಂದರು.</p>.<p>ಗ್ರಾಮೀಣ ಶಾಲೆಗಳ ಮುಂಭಾಗ ಶಿಕ್ಷಕಿಯರು ಬಣ್ಣದ ರಂಗೋಲಿ ಇಟ್ಟರೆ, ಶಿಕ್ಷಕರು ತಳಿರು ತೋರಣಗಳ ಸಿಂಗಾರ ಮಾಡಿ, ಹಬ್ಬದ ವಾತಾವರಣ ನಿರ್ಮಿಸಿದರು. ಮಕ್ಕಳಿಗೆ ಹೂ ಗುಚ್ಛ ನೀಡಿ ಸರಸ್ವತಿ ಪೂಜೆ ಮಾಡಿ ಸಹಿಯೂಟ ಬಡಿಸಲಾಯಿತು. ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಯಿತು.</p>.<p>ಎಸ್ಡಿಎಂಸಿ ಅಧ್ಯಕ್ಷ ಚಿನ್ನಸ್ವಾಮಿ, ಉಪಾಧ್ಯಕ್ಷೆ ಸಂಗೀತ, ಸದಸ್ಯರಾದ ರಾಜ, ಕಾವ್ಯ, ಶಿಕ್ಷಕರಾದ ನಂಜಯ್ಯ, ರಾಜೇಶ್, ಮಾಲಾವತಿ ಹಾಗೂ ಜಯಶ್ರೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>