<p><strong>ಹನೂರು:</strong> ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಂಗಳವಾರ ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕುಗಳಿಗೆ ಭೇಟಿನೀಡಿ ಹಲವೆಡೆ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲಿಸಿದರು.</p>.<p>ಕೊಳ್ಳೇಗಾಲದ ಮುಡಿಗುಂಡ ಸೇತುವೆಯನ್ನು ₹ 15 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದ್ದು ಶೀಘ್ರ ಸರ್ಕಾರದ ಅಂದಾಜು ಪರಿಶೀಲನಾ ಸಮಿತಿಯ ಮುಂದೆ ಪ್ರಸ್ತಾವ ಸಲ್ಲಿಸಲಾಗುವುದು. ಕಾಮಗಾರಿ ಸಂಬಂಧ ಮುಂದಿನ ಪ್ರಕ್ರಿಯೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.</p>.<p>ಬಳಿಕ ಹನೂರಿನಲ್ಲಿ ₹ 8.60 ಕೋಟಿ ವೆಚ್ಚದಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ದೊರೆತಿರುವ ಹಿನ್ನಲೆಯಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರೊಂದಿಗೆ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದರು. ಕಾಮಗಾರಿ ಅನುಷ್ಠಾನ ಸಂಬಂಧ ತ್ವರಿತ ಕ್ರಮ ವಹಿಸುವಂತೆ ಸೂಚಿಸಿದರು.</p>.<p>ತಾಲ್ಲೂಕಿನ ಬೈರನತ್ತ, ಬಿ.ಎಂ.ಹಳ್ಳಿ ಮಾರ್ಗ ಮಧ್ಯದ ಸಂಪರ್ಕ ತಟ್ಟೆಹಳ್ಳ ಸೇತುವೆಯನ್ನು 2.94 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್ ಕುಮಾರ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಮೇಶ್ಕುಮಾರ್ ಇನ್ನೀತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು:</strong> ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಂಗಳವಾರ ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕುಗಳಿಗೆ ಭೇಟಿನೀಡಿ ಹಲವೆಡೆ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲಿಸಿದರು.</p>.<p>ಕೊಳ್ಳೇಗಾಲದ ಮುಡಿಗುಂಡ ಸೇತುವೆಯನ್ನು ₹ 15 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದ್ದು ಶೀಘ್ರ ಸರ್ಕಾರದ ಅಂದಾಜು ಪರಿಶೀಲನಾ ಸಮಿತಿಯ ಮುಂದೆ ಪ್ರಸ್ತಾವ ಸಲ್ಲಿಸಲಾಗುವುದು. ಕಾಮಗಾರಿ ಸಂಬಂಧ ಮುಂದಿನ ಪ್ರಕ್ರಿಯೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.</p>.<p>ಬಳಿಕ ಹನೂರಿನಲ್ಲಿ ₹ 8.60 ಕೋಟಿ ವೆಚ್ಚದಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ದೊರೆತಿರುವ ಹಿನ್ನಲೆಯಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರೊಂದಿಗೆ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದರು. ಕಾಮಗಾರಿ ಅನುಷ್ಠಾನ ಸಂಬಂಧ ತ್ವರಿತ ಕ್ರಮ ವಹಿಸುವಂತೆ ಸೂಚಿಸಿದರು.</p>.<p>ತಾಲ್ಲೂಕಿನ ಬೈರನತ್ತ, ಬಿ.ಎಂ.ಹಳ್ಳಿ ಮಾರ್ಗ ಮಧ್ಯದ ಸಂಪರ್ಕ ತಟ್ಟೆಹಳ್ಳ ಸೇತುವೆಯನ್ನು 2.94 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್ ಕುಮಾರ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಮೇಶ್ಕುಮಾರ್ ಇನ್ನೀತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>