<p><strong>ಕೊಳ್ಳೇಗಾಲ</strong>: ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಆನಂದಮೂರ್ತಿ ನಗರದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.</p><p>ಬಳಿಕ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ‘ನನ್ನ ಗೆಲುವಿಗೆ ಭೀಮನಗರದ ಎಲ್ಲಾ ಹಿರಿಯರು, ಕಿರಿಯರ ಸಹಕಾರಕ್ಕೆ ಧನ್ಯವಾದಗಳು’ ಎಂದರು.</p><p>ಭೀಮನಗರದ ಯಜಮಾನರು ಹಾಗೂ ಮುಖಂಡರ ಸಹಕಾರ ಬೇಕಿದೆ. ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ಉದ್ಘಾಟನೆ ಮಾಡುವವರೆಗೂ ನಾನು ಯಾವುದೇ ಹಾರವಾಗಲಿ ಹಾಗೂ ಸನ್ಮಾನವಾಗಲಿ ಸ್ವೀಕರಿಸುವುದಿಲ್ಲ.</p><p>ಇಂದಿನ ಸಭೆಯಲ್ಲಿ ಭೀಮನಗರದ ಮುಖಂಡರು ನೀಡಿದ್ದ ಸಲಹೆಗಳನ್ನು ಚರ್ಚಿಸಿ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.</p><p>ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ಪಾಪಣ್ಣ, ಸಹ ಕಾರ್ಯದರ್ಶಿ ಶಶಿಧರ, ಖಂಜಾಚಿ ರಾಜೇಶ್, ಮುಖಂಡ ನಟರಾಜು, ಲಿಂಗರಾಜು, ಕೆ.ನಾಗರಾಜು, ರಮೇಶ್, ಕೆ.ಕೆ.ಮೂರ್ತಿ, ಸಿದ್ದಪ್ಪಾಜಿ, ಮಣಿ, ದಿಲೀಪ್ ಸಿದ್ದಪ್ಪಾಜಿ, ಜಗದೀಶ್, ರಾಜಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ</strong>: ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಆನಂದಮೂರ್ತಿ ನಗರದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.</p><p>ಬಳಿಕ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ‘ನನ್ನ ಗೆಲುವಿಗೆ ಭೀಮನಗರದ ಎಲ್ಲಾ ಹಿರಿಯರು, ಕಿರಿಯರ ಸಹಕಾರಕ್ಕೆ ಧನ್ಯವಾದಗಳು’ ಎಂದರು.</p><p>ಭೀಮನಗರದ ಯಜಮಾನರು ಹಾಗೂ ಮುಖಂಡರ ಸಹಕಾರ ಬೇಕಿದೆ. ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ಉದ್ಘಾಟನೆ ಮಾಡುವವರೆಗೂ ನಾನು ಯಾವುದೇ ಹಾರವಾಗಲಿ ಹಾಗೂ ಸನ್ಮಾನವಾಗಲಿ ಸ್ವೀಕರಿಸುವುದಿಲ್ಲ.</p><p>ಇಂದಿನ ಸಭೆಯಲ್ಲಿ ಭೀಮನಗರದ ಮುಖಂಡರು ನೀಡಿದ್ದ ಸಲಹೆಗಳನ್ನು ಚರ್ಚಿಸಿ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.</p><p>ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ಪಾಪಣ್ಣ, ಸಹ ಕಾರ್ಯದರ್ಶಿ ಶಶಿಧರ, ಖಂಜಾಚಿ ರಾಜೇಶ್, ಮುಖಂಡ ನಟರಾಜು, ಲಿಂಗರಾಜು, ಕೆ.ನಾಗರಾಜು, ರಮೇಶ್, ಕೆ.ಕೆ.ಮೂರ್ತಿ, ಸಿದ್ದಪ್ಪಾಜಿ, ಮಣಿ, ದಿಲೀಪ್ ಸಿದ್ದಪ್ಪಾಜಿ, ಜಗದೀಶ್, ರಾಜಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>