ವಡೆಯನಪುರ, ಬೊಮ್ಮಲಾಪುರ, ಕೊಡಸೋಗೆ ಸುತ್ತಮುತ್ತಲ ಗ್ರಾಮಗಳ ಜಮೀನಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಉಪಟಳ ನೀಡಿ, ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ಹೊತ್ತೊಯ್ಯುತ್ತಿತ್ತು. ಇದರಿಂದ ಭಯಭೀತರಾಗಿದ್ದ ರೈತರು ಚಿರತೆ ಸೆರೆಗೆ ಬೋನ್ ಇಡುವಂತೆ ಒತ್ತಾಯಿಸಿದ್ದರು. ರೈತರ ಆಕ್ರೋಶದ ಹಿನ್ನೆಲೆಯಲ್ಲಿ ಹೆಜ್ಜೆ ಗುರುತು ಹಾಗೂ ಚಲನವಲನಗಳ ಆಧಾರ ಮೇಲೆ ವಡೆಯನಪುರ ಗ್ರಾಮದ ಗಿರೀಶ್ ಎಂಬುವರ ಜಮೀನಿನಲ್ಲಿ ಬೋನ್ ಇರಿಸಲಾಗಿತ್ತು.