<figcaption>""</figcaption>.<p><strong>ಹನೂರು (ಚಾಮರಾಜನಗರ):</strong> ಕೋವಿಡ್ ಕಾರಣದಿಂದ ಕುಸಿದಿದ್ದ ಇಲ್ಲಿನ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಆದಾಯ ಈಗ ಚೇತರಿಸಿಕೊಳ್ಳುತ್ತಿದ್ದು, 54 ದಿನಗಳ ಅವಧಿಯಲ್ಲಿ ₹2.21 ಕೋಟಿ ಹುಂಡಿ ಕಾಣಿಕೆ ಸಂಗ್ರಹವಾಗಿದೆ.</p>.<p>ಗುರುವಾರ ದೇವಾಲಯದಲ್ಲಿ ತಡ ರಾತ್ರಿವರೆಗೆ ಹುಂಡಿ ಎಣಿಕೆ ನಡೆದಿದ್ದು, 40 ಗ್ರಾಂ ಚಿನ್ನ, 1.65 ಕೆಜಿ ಬೆಳ್ಳಿಯನ್ನೂ ಭಕ್ತರು ಕಾಣಿಕೆ ರೂಪದಲ್ಲಿ ಹಾಕಿದ್ದಾರೆ. ಈ ಮೊದಲು, ಸೆಪ್ಟೆಂಬರ್ 18ರಂದು ಹುಂಡಿ ಎಣಿಕೆ ನಡೆದಿತ್ತು.</p>.<p>ಕೋವಿಡ್ ಕಾರಣದಿಂದ ನವೆಂಬರ್ 1 ರವರೆಗೂ ಬೆಟ್ಟದಲ್ಲಿ ವಾಸ್ತವ್ಯಕ್ಕೆ, ಮುಡಿ ಸೇವೆ ಹಾಗೂ ಇತರ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿತ್ತು.</p>.<p>ನ.1ರ ನಂತರ ಭಕ್ತರಿಗೆ ಮುಡಿಸೇವೆ, ಚಿನ್ನದ ತೇರಿನ ಸೇವೆ ಸೇರಿದಂತೆ ಹಲವು ಸೇವೆಗಳನ್ನು ಮಾಡಲು ಅನುಕೂಲ ಕಲ್ಪಿಸಲಾಗಿದೆ.</p>.<div style="text-align:center"><figcaption><strong>ಸಂಗ್ರಹವಾಗಿರುವ ಹುಂಡಿ ಕಾಣಿಕೆ</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಹನೂರು (ಚಾಮರಾಜನಗರ):</strong> ಕೋವಿಡ್ ಕಾರಣದಿಂದ ಕುಸಿದಿದ್ದ ಇಲ್ಲಿನ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಆದಾಯ ಈಗ ಚೇತರಿಸಿಕೊಳ್ಳುತ್ತಿದ್ದು, 54 ದಿನಗಳ ಅವಧಿಯಲ್ಲಿ ₹2.21 ಕೋಟಿ ಹುಂಡಿ ಕಾಣಿಕೆ ಸಂಗ್ರಹವಾಗಿದೆ.</p>.<p>ಗುರುವಾರ ದೇವಾಲಯದಲ್ಲಿ ತಡ ರಾತ್ರಿವರೆಗೆ ಹುಂಡಿ ಎಣಿಕೆ ನಡೆದಿದ್ದು, 40 ಗ್ರಾಂ ಚಿನ್ನ, 1.65 ಕೆಜಿ ಬೆಳ್ಳಿಯನ್ನೂ ಭಕ್ತರು ಕಾಣಿಕೆ ರೂಪದಲ್ಲಿ ಹಾಕಿದ್ದಾರೆ. ಈ ಮೊದಲು, ಸೆಪ್ಟೆಂಬರ್ 18ರಂದು ಹುಂಡಿ ಎಣಿಕೆ ನಡೆದಿತ್ತು.</p>.<p>ಕೋವಿಡ್ ಕಾರಣದಿಂದ ನವೆಂಬರ್ 1 ರವರೆಗೂ ಬೆಟ್ಟದಲ್ಲಿ ವಾಸ್ತವ್ಯಕ್ಕೆ, ಮುಡಿ ಸೇವೆ ಹಾಗೂ ಇತರ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿತ್ತು.</p>.<p>ನ.1ರ ನಂತರ ಭಕ್ತರಿಗೆ ಮುಡಿಸೇವೆ, ಚಿನ್ನದ ತೇರಿನ ಸೇವೆ ಸೇರಿದಂತೆ ಹಲವು ಸೇವೆಗಳನ್ನು ಮಾಡಲು ಅನುಕೂಲ ಕಲ್ಪಿಸಲಾಗಿದೆ.</p>.<div style="text-align:center"><figcaption><strong>ಸಂಗ್ರಹವಾಗಿರುವ ಹುಂಡಿ ಕಾಣಿಕೆ</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>