<p><strong>ಚಾಮರಾಜನಗರ:</strong> ನಗರದ ಸೋಮವಾರಪೇಟೆಯ ಶಿರಗಳ್ಳಿ ಲಕ್ಷ್ಮಿ ದೇವಸ್ಥಾನದ ಹುಂಡಿಗೆ ದುಷ್ಕರ್ಮಿಗಳು ಗುರುವಾರ ರಾತ್ರಿ ಕನ್ನ ಹಾಕಿದ್ದಾರೆ.</p>.<p>ದೇವಸ್ಥಾನದ ಬಳಿಯ ಮರದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ದೇವಸ್ಥಾನದ ಒಳಗಡೆ ಇದ್ದ ಡಿವಿಆರ್ ಸಾಧನವನ್ನೂ ಕದ್ದೊಯ್ದಿದ್ದಾರೆ.</p>.<p>‘ದೇವಸ್ಥಾನದ ಕಾಣಿಕೆ ಡಬ್ಬವನ್ನು ಒಡೆದಿರುವ ಕಳ್ಳರು, ಅದರಲ್ಲಿದ್ದ ಹಣವನ್ನು ಹೊತ್ತೊಯ್ದಿದ್ದಾರೆ. ₹ 5– 8 ಸಾವಿರದಷ್ಟು ಹಣ ಇದ್ದಿರಬಹುದು ಎಂದು ಅಂದಾಜಿಸಲಾಗಿದೆ’ ಎಂದು ರಾಮಸಮುದ್ರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುನೀಲ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬೆಳಿಗ್ಗೆ ಅರ್ಚಕರು ಪೂಜೆಗಾಗಿ ದೇವಸ್ಥಾನಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಅರ್ಚಕರು ದೂರು ನೀಡಿದ್ದಾರೆ’ ಎಂದರು.</p>.<p>ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p class="Subhead">ಶಾಲೆಗೂ ನುಗ್ಗಿದ ಕಳ್ಳರು:ಸಮೀಪದಲ್ಲೇ ಇರುವ ಯೂನಿವರ್ಸ್ ಶಾಲೆಯ ಕೊಠಡಿಯ ಬೀಗ ಒಡೆದು ಒಳನುಗ್ಗಿರುವ ಕಳ್ಳರು, ಕಪಾಟಿನ ಬೇಗ ಒಡೆದಿದ್ದಾರೆ. ದಾಖಲೆಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿದ್ದಾರೆ.</p>.<p>‘ಶಾಲೆಯಲ್ಲಿ ಬೆಲೆ ಬಾಳುವ ವಸ್ತುಗಳು ಏನೂ ಹೋಗಿಲ್ಲ. ಈ ಬಗ್ಗೆ ದೂರು ದಾಖಲಾಗಿಲ್ಲ’ ಎಂದು ಸುನೀಲ್ ಹೇಳಿದ್ದಾರೆ.</p>.<p>ಇದೇ ದೇವಸ್ಥಾನದಲ್ಲಿ 4 ತಿಂಗಳ ಹಿಂದೆಯೂ ಕಳ್ಳತನದ ಯತ್ನ ನಡೆದಿತ್ತು ಎಂದು ಸ್ಥಳೀಯರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ನಗರದ ಸೋಮವಾರಪೇಟೆಯ ಶಿರಗಳ್ಳಿ ಲಕ್ಷ್ಮಿ ದೇವಸ್ಥಾನದ ಹುಂಡಿಗೆ ದುಷ್ಕರ್ಮಿಗಳು ಗುರುವಾರ ರಾತ್ರಿ ಕನ್ನ ಹಾಕಿದ್ದಾರೆ.</p>.<p>ದೇವಸ್ಥಾನದ ಬಳಿಯ ಮರದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ದೇವಸ್ಥಾನದ ಒಳಗಡೆ ಇದ್ದ ಡಿವಿಆರ್ ಸಾಧನವನ್ನೂ ಕದ್ದೊಯ್ದಿದ್ದಾರೆ.</p>.<p>‘ದೇವಸ್ಥಾನದ ಕಾಣಿಕೆ ಡಬ್ಬವನ್ನು ಒಡೆದಿರುವ ಕಳ್ಳರು, ಅದರಲ್ಲಿದ್ದ ಹಣವನ್ನು ಹೊತ್ತೊಯ್ದಿದ್ದಾರೆ. ₹ 5– 8 ಸಾವಿರದಷ್ಟು ಹಣ ಇದ್ದಿರಬಹುದು ಎಂದು ಅಂದಾಜಿಸಲಾಗಿದೆ’ ಎಂದು ರಾಮಸಮುದ್ರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುನೀಲ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬೆಳಿಗ್ಗೆ ಅರ್ಚಕರು ಪೂಜೆಗಾಗಿ ದೇವಸ್ಥಾನಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಅರ್ಚಕರು ದೂರು ನೀಡಿದ್ದಾರೆ’ ಎಂದರು.</p>.<p>ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p class="Subhead">ಶಾಲೆಗೂ ನುಗ್ಗಿದ ಕಳ್ಳರು:ಸಮೀಪದಲ್ಲೇ ಇರುವ ಯೂನಿವರ್ಸ್ ಶಾಲೆಯ ಕೊಠಡಿಯ ಬೀಗ ಒಡೆದು ಒಳನುಗ್ಗಿರುವ ಕಳ್ಳರು, ಕಪಾಟಿನ ಬೇಗ ಒಡೆದಿದ್ದಾರೆ. ದಾಖಲೆಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿದ್ದಾರೆ.</p>.<p>‘ಶಾಲೆಯಲ್ಲಿ ಬೆಲೆ ಬಾಳುವ ವಸ್ತುಗಳು ಏನೂ ಹೋಗಿಲ್ಲ. ಈ ಬಗ್ಗೆ ದೂರು ದಾಖಲಾಗಿಲ್ಲ’ ಎಂದು ಸುನೀಲ್ ಹೇಳಿದ್ದಾರೆ.</p>.<p>ಇದೇ ದೇವಸ್ಥಾನದಲ್ಲಿ 4 ತಿಂಗಳ ಹಿಂದೆಯೂ ಕಳ್ಳತನದ ಯತ್ನ ನಡೆದಿತ್ತು ಎಂದು ಸ್ಥಳೀಯರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>