‘ಕೈಗಾರಿಕಾ ಪ್ರದೇಶದ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಮಗುಚಿದೆ. ಬಸ್ನಲ್ಲಿ ನೌಕರರು ಇದ್ದರು. 38 ಜನರ ಪೈಕಿ ನಾಲ್ವರಿಗೆ ತೀವ್ರ ಏಟಾಗಿದೆ. ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮರಿಯಲಾದ ಬಸವರಾಜೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಯಾರ ಪ್ರಾಣಕ್ಕೂ ಅಪಾಯವಿಲ್ಲ’ ಎಂದು ಚಾಮರಾಜನಗರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ರವಿಶಂಕರ್ ಬಿ.ಎಸ್. ‘ಪ್ರಜಾವಾಣಿ’ಗೆ ತಿಳಿಸಿದರು.