<p>ಚಾಮರಾಜನಗರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಗಣನೀಯ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಗುರುವಾರ 176 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ 31 ಮಕ್ಕಳಿದ್ದಾರೆ.</p>.<p>ಹನೂರು ತಾಲ್ಲೂಕಿನ್ಲಲೇ 28 ಮಕ್ಕಳಿಗೆ ಕೊರೊನಾ ವೈರಸ್ ತಗುಲಿರುವುದು ಖಚಿತವಾಗಿದೆ. ಎಲ್ಲ ಮಕ್ಕಳು ಒಡೆಯರಪಾಳ್ಯದ ಟಿಬೆಟಿಯನ್ ನಿರಾಶ್ರಿತ ಶಿಬಿರಕ್ಕೆ ಸೇರಿದವರು ಎಂದು ತಾಲ್ಲೂಕು ಆಡಳಿತ ತಿಳಿಸಿದೆ. ಗುರುವಾರ ನಾಲ್ವರು ಗುಣಮುಖರಾಗಿದ್ದಾರೆ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ 451ಕ್ಕೆ ಏರಿದೆ. ಗುರುವಾರದಿಂದ ಸೋಂಕಿತರನ್ನು ಹೋಂ ಐಸೊಲೇಷನ್ಗೆ ಕಳುಹಿಸಲಾಗುತ್ತಿದೆ. ಸೋಂಕು ದೃಢಪಟ್ಟ 176 ಮಂದಿಯ ಪೈಕಿ 149 ಮಂದಿಯನ್ನು ಮನೆಯಲ್ಲೇ ಪ್ರತ್ಯೇಕ ವಾಸಕ್ಕೆ ಕಳುಹಿಸಲಾಗಿದೆ. ಒಟ್ಟು 154 ಮಂದಿ ಮನೆಯಲ್ಲೇ ಇದ್ದು ಆರೈಕೆ ಪಡುತ್ತಿದ್ದಾರೆ.</p>.<p>ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 33 ಸಾವಿರ ದಾಟಿದೆ (33,139).ಗುರುವಾರ ನಾಲ್ವರು ಗುಣಮುಖರಾಗಿದ್ದು, ಈವರೆ್ಗೆ 32,147 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<p class="Subhead">5000 ಪರೀಕ್ಷೆ ಗುರಿ: ಈ ಮಧ್ಯೆ, ಜಿಲ್ಲೆಯಲ್ಲಿ ಪ್ರತಿ ದಿನ 5000 ಕೋವಿಡ್ ಪರೀಕ್ಷೆಗಳನ್ನು ನಡೆಸುವ ಗುರಿಯನ್ನು ರಾಜ್ಯ ಸರ್ಕಾರ ನೀಡಿದೆ. ಇದುವರೆಗೂ 2000 ಇತ್ತು. ಆದರೆ, ಅಷ್ಟು ಪರೀಕ್ಷೆಗಳನ್ನೂ ನಡೆಸಲು ಜಿಲ್ಲಾಡಳಿತಕ್ಕೆ ಸಾಧ್ಯವಾಗಿಲ್ಲ.</p>.<p>ಗುರುವಾರ 1,324 ಆರ್ಟಿಪಿಸಿಆರ್, 498 ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ (ರ್ಯಾಟ್) ಸೇರಿದಂತೆ 1,822 ಕೋವಿಡ್ ಪರೀಕ್ಷೆಗಳ ವರದಿ ಬಂದಿದೆ. ಈ ಪೈಕಿ ಆರ್ಟಿಪಿಸಿಆರ್ ಪರೀಕ್ಷೆಯಲ್ಲಿ 111 ಹಾಗೂ ರ್ಯಾಟ್ನಲ್ಲಿ 65 ಸೇರಿ 176 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.</p>.<p>ಹನೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂದರೆ 59 ಮಂದಿ, ಚಾಮರಾಜನಗರದಲ್ಲಿ 46, ಕೊಳ್ಳೇಗಾಲದಲ್ಲಿ 32, ಗುಂಡ್ಲುಪೇಟೆಯಲ್ಲಿ 29 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 10 ಮಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ.</p>.<p>ಈ ಪೈಕಿ, ಯಂದೂರಿನಲ್ಲಿ ಒಬ್ಬ, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಇಬ್ಬರು, ಹನೂರಿನಲ್ಲಿ 28 ಮಕ್ಕಳು ಕೋವಿಡ್ನಿಂದ ಬಳಲುತ್ತಿದ್ದಾರೆ.</p>.<p>’ಹನೂರು ಟಿಬೆಟಿಯನ್ನರ ಶಿಬಿರದಲ್ಲಿ 28 ಮಕ್ಕಳಿಗೆ ಸೋಂಕು ದೃಢಪಟ್ಟಿದೆ. ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಾಗುವುದು‘ ಎಂದು ಪ್ರಭಾರ ಡಿಡಿಪಿಐ ಲಕ್ಷ್ಮಿಪತಿ ಅವರು ’ಪ್ರಜಾವಾಣಿ‘ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಗಣನೀಯ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಗುರುವಾರ 176 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ 31 ಮಕ್ಕಳಿದ್ದಾರೆ.</p>.<p>ಹನೂರು ತಾಲ್ಲೂಕಿನ್ಲಲೇ 28 ಮಕ್ಕಳಿಗೆ ಕೊರೊನಾ ವೈರಸ್ ತಗುಲಿರುವುದು ಖಚಿತವಾಗಿದೆ. ಎಲ್ಲ ಮಕ್ಕಳು ಒಡೆಯರಪಾಳ್ಯದ ಟಿಬೆಟಿಯನ್ ನಿರಾಶ್ರಿತ ಶಿಬಿರಕ್ಕೆ ಸೇರಿದವರು ಎಂದು ತಾಲ್ಲೂಕು ಆಡಳಿತ ತಿಳಿಸಿದೆ. ಗುರುವಾರ ನಾಲ್ವರು ಗುಣಮುಖರಾಗಿದ್ದಾರೆ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ 451ಕ್ಕೆ ಏರಿದೆ. ಗುರುವಾರದಿಂದ ಸೋಂಕಿತರನ್ನು ಹೋಂ ಐಸೊಲೇಷನ್ಗೆ ಕಳುಹಿಸಲಾಗುತ್ತಿದೆ. ಸೋಂಕು ದೃಢಪಟ್ಟ 176 ಮಂದಿಯ ಪೈಕಿ 149 ಮಂದಿಯನ್ನು ಮನೆಯಲ್ಲೇ ಪ್ರತ್ಯೇಕ ವಾಸಕ್ಕೆ ಕಳುಹಿಸಲಾಗಿದೆ. ಒಟ್ಟು 154 ಮಂದಿ ಮನೆಯಲ್ಲೇ ಇದ್ದು ಆರೈಕೆ ಪಡುತ್ತಿದ್ದಾರೆ.</p>.<p>ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 33 ಸಾವಿರ ದಾಟಿದೆ (33,139).ಗುರುವಾರ ನಾಲ್ವರು ಗುಣಮುಖರಾಗಿದ್ದು, ಈವರೆ್ಗೆ 32,147 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<p class="Subhead">5000 ಪರೀಕ್ಷೆ ಗುರಿ: ಈ ಮಧ್ಯೆ, ಜಿಲ್ಲೆಯಲ್ಲಿ ಪ್ರತಿ ದಿನ 5000 ಕೋವಿಡ್ ಪರೀಕ್ಷೆಗಳನ್ನು ನಡೆಸುವ ಗುರಿಯನ್ನು ರಾಜ್ಯ ಸರ್ಕಾರ ನೀಡಿದೆ. ಇದುವರೆಗೂ 2000 ಇತ್ತು. ಆದರೆ, ಅಷ್ಟು ಪರೀಕ್ಷೆಗಳನ್ನೂ ನಡೆಸಲು ಜಿಲ್ಲಾಡಳಿತಕ್ಕೆ ಸಾಧ್ಯವಾಗಿಲ್ಲ.</p>.<p>ಗುರುವಾರ 1,324 ಆರ್ಟಿಪಿಸಿಆರ್, 498 ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ (ರ್ಯಾಟ್) ಸೇರಿದಂತೆ 1,822 ಕೋವಿಡ್ ಪರೀಕ್ಷೆಗಳ ವರದಿ ಬಂದಿದೆ. ಈ ಪೈಕಿ ಆರ್ಟಿಪಿಸಿಆರ್ ಪರೀಕ್ಷೆಯಲ್ಲಿ 111 ಹಾಗೂ ರ್ಯಾಟ್ನಲ್ಲಿ 65 ಸೇರಿ 176 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.</p>.<p>ಹನೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂದರೆ 59 ಮಂದಿ, ಚಾಮರಾಜನಗರದಲ್ಲಿ 46, ಕೊಳ್ಳೇಗಾಲದಲ್ಲಿ 32, ಗುಂಡ್ಲುಪೇಟೆಯಲ್ಲಿ 29 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 10 ಮಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ.</p>.<p>ಈ ಪೈಕಿ, ಯಂದೂರಿನಲ್ಲಿ ಒಬ್ಬ, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಇಬ್ಬರು, ಹನೂರಿನಲ್ಲಿ 28 ಮಕ್ಕಳು ಕೋವಿಡ್ನಿಂದ ಬಳಲುತ್ತಿದ್ದಾರೆ.</p>.<p>’ಹನೂರು ಟಿಬೆಟಿಯನ್ನರ ಶಿಬಿರದಲ್ಲಿ 28 ಮಕ್ಕಳಿಗೆ ಸೋಂಕು ದೃಢಪಟ್ಟಿದೆ. ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಾಗುವುದು‘ ಎಂದು ಪ್ರಭಾರ ಡಿಡಿಪಿಐ ಲಕ್ಷ್ಮಿಪತಿ ಅವರು ’ಪ್ರಜಾವಾಣಿ‘ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>