<p>ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 37 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 50 ಮಂದಿ ಗುಣಮುಖರಾಗಿದ್ದಾರೆ.</p>.<p>ಎರಡು ದಿನಗಳಿಂದ ಸಾವಿನ ಪ್ರಕರಣ ಹೆಚ್ಚಾಗಿದ್ದು, ಶನಿವಾರವೂ ಮೂವರು ಮೃತಪಟ್ಟಿದ್ದಾರೆ.</p>.<p>ಗುಣಮುಖರಾದವರ ಸಂಖ್ಯೆ ಸೋಂಕಿತರಿಗಿಂತ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 440ಕ್ಕೆ ಇಳಿದಿದೆ. 27 ಮಂದಿ ಐಸಿಯುನಲ್ಲಿ ಹಾಗೂ 23 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಉಳಿದವರು ಕೋವಿಡ್ ಆಸ್ಪತ್ರೆ ಹಾಗೂ ಕೇರ್ ಕೇಂದ್ರಗಳಲ್ಲಿದ್ದಾರೆ.</p>.<p>ಜಿಲ್ಲೆಯಲ್ಲಿ ಇದುವರೆಗೆ 31,313 ಮಂದಿಗೆ ಕೋವಿಡ್ ಬಂದಿದೆ. 30,358 ಮಂದಿ ಗುಣಮುಖರಾಗಿದ್ದಾರೆ.</p>.<p>ಶನಿವಾರ 1,508 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,467 ಮಂದಿಗೆ ನೆಗೆಟಿವ್ ಆಗಿದೆ. 41 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಜಿಲ್ಲಾಡಳಿತ 37 ಪ್ರಕರಣಗಳನ್ನು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.</p>.<p>37 ಮಂದಿ ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ 16 ಮಂದಿ ಇದ್ದಾರೆ. ಗುಂಡ್ಲುಪೇಟೆಯ ಮೂವರು, ಕೊಳ್ಳೇಗಾಲದ ಆರು ಮಂದಿ, ಹನೂರಿನ ಒಂಬತ್ತು ಹಾಗೂ ಯಳಂದೂರು ತಾಲ್ಲೂಕಿನ ಮೂವರು ಸೇರಿದ್ದಾರೆ.</p>.<p>ಗುಣಮುಖರಾದ 50 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ 24, ಗುಂಡ್ಲುಪೇಟೆಯ ಐವರು, ಕೊಳ್ಳೇಗಾಲದ ಆರು, ಹನೂರಿನ ಎಂಟು ಹಾಗೂ ಯಳಂದೂರು ತಾಲ್ಲೂಕಿನ ನಾಲ್ವರು ಮತ್ತು ಹೊರಜಿಲ್ಲೆಯ ಮೂವರು ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 37 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 50 ಮಂದಿ ಗುಣಮುಖರಾಗಿದ್ದಾರೆ.</p>.<p>ಎರಡು ದಿನಗಳಿಂದ ಸಾವಿನ ಪ್ರಕರಣ ಹೆಚ್ಚಾಗಿದ್ದು, ಶನಿವಾರವೂ ಮೂವರು ಮೃತಪಟ್ಟಿದ್ದಾರೆ.</p>.<p>ಗುಣಮುಖರಾದವರ ಸಂಖ್ಯೆ ಸೋಂಕಿತರಿಗಿಂತ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 440ಕ್ಕೆ ಇಳಿದಿದೆ. 27 ಮಂದಿ ಐಸಿಯುನಲ್ಲಿ ಹಾಗೂ 23 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಉಳಿದವರು ಕೋವಿಡ್ ಆಸ್ಪತ್ರೆ ಹಾಗೂ ಕೇರ್ ಕೇಂದ್ರಗಳಲ್ಲಿದ್ದಾರೆ.</p>.<p>ಜಿಲ್ಲೆಯಲ್ಲಿ ಇದುವರೆಗೆ 31,313 ಮಂದಿಗೆ ಕೋವಿಡ್ ಬಂದಿದೆ. 30,358 ಮಂದಿ ಗುಣಮುಖರಾಗಿದ್ದಾರೆ.</p>.<p>ಶನಿವಾರ 1,508 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,467 ಮಂದಿಗೆ ನೆಗೆಟಿವ್ ಆಗಿದೆ. 41 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಜಿಲ್ಲಾಡಳಿತ 37 ಪ್ರಕರಣಗಳನ್ನು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.</p>.<p>37 ಮಂದಿ ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ 16 ಮಂದಿ ಇದ್ದಾರೆ. ಗುಂಡ್ಲುಪೇಟೆಯ ಮೂವರು, ಕೊಳ್ಳೇಗಾಲದ ಆರು ಮಂದಿ, ಹನೂರಿನ ಒಂಬತ್ತು ಹಾಗೂ ಯಳಂದೂರು ತಾಲ್ಲೂಕಿನ ಮೂವರು ಸೇರಿದ್ದಾರೆ.</p>.<p>ಗುಣಮುಖರಾದ 50 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ 24, ಗುಂಡ್ಲುಪೇಟೆಯ ಐವರು, ಕೊಳ್ಳೇಗಾಲದ ಆರು, ಹನೂರಿನ ಎಂಟು ಹಾಗೂ ಯಳಂದೂರು ತಾಲ್ಲೂಕಿನ ನಾಲ್ವರು ಮತ್ತು ಹೊರಜಿಲ್ಲೆಯ ಮೂವರು ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>