ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಹನೂರು | ಮತದಾನ ಬಹಿಷ್ಕಾರದ ಬೆದರಿಕೆ: ಜಿಲ್ಲಾಡಳಿತಕ್ಕೆ ತಲೆನೋವು

ಹನೂರು: ಮೂಲ ಸೌಕರ್ಯಗಳಿಗೆ ಆಗ್ರಹಿಸಿ ಹಲವು ಗ್ರಾಮಗಳ ಜನರ ನಿರ್ಧಾರ, ಅಧಿಕಾರಿಗಳ ಮುಂದೆ ಸವಾಲು
Published : 25 ಮಾರ್ಚ್ 2024, 7:42 IST
Last Updated : 25 ಮಾರ್ಚ್ 2024, 7:42 IST
ಫಾಲೋ ಮಾಡಿ
Comments
ಸೌಕರ್ಯಗಳಿಗೆ ಆಗ್ರಹಿಸಿ ಮತದಾನ ಬಹಿಷ್ಕರಿಸಲು ನಿರ್ಧರಿಸಿರುವ ಡಿ.ಎಂ.ಸಮುದ್ರದ ಗ್ರಾಮಸ್ಥರು ಧರಣಿ ಕುಳಿತಿರುವುದು
ಸೌಕರ್ಯಗಳಿಗೆ ಆಗ್ರಹಿಸಿ ಮತದಾನ ಬಹಿಷ್ಕರಿಸಲು ನಿರ್ಧರಿಸಿರುವ ಡಿ.ಎಂ.ಸಮುದ್ರದ ಗ್ರಾಮಸ್ಥರು ಧರಣಿ ಕುಳಿತಿರುವುದು
ಗ್ರಾಮಸ್ಥರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಪಟ್ಟಿ ಮಾಡಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಜನರು ಮತದಾನ ಮಾಡುವಂತೆ ಮನವೊಲಿಸಲಾಗುವುದು
ವೈ.ಕೆ.ಗುರುಪ್ರಸಾದ್ ಹನೂರು ತಹಶೀಲ್ದಾರ್
ಸೌಲಭ್ಯ ಕಲ್ಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿ: ಡಿ.ಸಿ
ಈ ಬಗ್ಗೆ ’ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್‌ ಅವರು ‘ಚುನಾವಣೆ ಬಹಿಷ್ಕಾರ ಮಾಡುವುದಾಗಿ ಹೇಳಿರುವ ಗ್ರಾಮಸ್ಥರನ್ನು ಭೇಟಿ ಮಾಡಿ ಮನವೊಲಿಕೆ ಮಾಡಲಾಗುತ್ತಿದೆ. ನಾನು ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ಎಸ್‌ಪಿಯವರು ಸೋಮವಾರ ಖುದ್ದಾಗಿ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತನಾಡಲಿದ್ದೇವೆ’ ಎಂದರು.  ‘ಗ್ರಾಮಸ್ಥರು ಮೂಲಸೌಕರ್ಯಗಳನ್ನು ಕೇಳುವುದರಲ್ಲಿ ತಪ್ಪಿಲ್ಲ. ಅವುಗಳನ್ನು ಕಲ್ಪಿಸುವುದು ನಮ್ಮ ಜವಾಬ್ದಾರಿ. ಮಹದೇಶ್ವರ ಬೆಟ್ಟ ವ್ಯಾಪ್ತಿಯ ಗ್ರಾಮಗಳಿಗೆ ರಸ್ತೆ ಹಾಗೂ ವಿದ್ಯುತ್‌ ಸೌಲಭ್ಯ ಕಲ್ಪಿಸುವುದಕ್ಕಾಗಿ ₹38 ಕೋಟಿ ವೆಚ್ಚದ ಯೋಜನೆಯನ್ನು ರೂಪಿಸಲಾಗಿದೆ. ಅದರ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮಲೆ ಮಹದೇಶ್ವರ ವನ್ಯಧಾಮದ ಮೂರು ಕಾವೇರಿ ವನ್ಯಧಾಮ ಮತ್ತು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ತಲಾ ಒಂದು ಸೇರಿದಂತೆ ಐದು ಪೋಡುಗಳಿಗೆ ವಿದ್ಯುತ್‌ ಸೌಲಭ್ಯ ಕಲ್ಪಿಸುವುದಕ್ಕೆ ಅರಣ್ಯ ಇಲಾಖೆ ಅನುಮತಿ ಪಡೆಯಲು ಅರ್ಜಿ ಸಲ್ಲಿಸಲಾಗಿದೆ’ ಎಂದು ಅವರು ಹೇಳಿದರು.  ‘ಗ್ರಾಮಸ್ಥರ ಅನುಕೂಲಕ್ಕಾಗಿ ಜನ ವನ ಸೇತುವೆ ಸಾರಿಗೆ ಅವಲಂಬಿಸಲಾಗಿದೆ. ಆಧಾರ್‌ ಸೌಲಭ್ಯ ಗೃಹಲಕ್ಷ್ಮಿ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳನ್ನು ಅಲ್ಲಿನ ಫಲಾನುಭವಿಗಳಿಗೂ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಅರಣ್ಯ ಪ್ರದೇಶದಲ್ಲಿ ಗ್ರಾಮಗಳು ಇರುವುದರಿಂದ ಯೋಜನೆ ಅನುಷ್ಠಾನಕ್ಕೆ ಸ್ವಲ್ಪ ಸಮಯ ಬೇಕು. ಗ್ರಾಮಸ್ಥರನ್ನು ಭೇಟಿಯಾಗಿ ಇವುಗಳನ್ನು ಮನವರಿಕೆ ಮಾಡಲಾಗುವುದು’ ಎಂದು ಶಿಲ್ಪಾ ನಾಗ್‌ ಹೇಳಿದರು. 
ಬಿಳಿಗಿರಿರಂಗನಬೆಟ್ಟದಲ್ಲೂ ಬಹಿಷ್ಕಾರದ ಬೆದರಿಕೆ
ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿರುವ ಸೋಲಿಗರನ್ನು ಒಕ್ಕಲೆಬ್ಬಿಸುವ ಪ್ರಯತ್ನವನ್ನು ಅರಣ್ಯ ಮತ್ತು ಕಂದಾಯ ಇಲಾಖೆಗಳು ಮಾಡುತ್ತಿವೆ ಎಂದು ಆರೋಪಿಸಿರುವ ಮುಖಂಡರು ಮತದಾನ ಬಹಿಷ್ಕರಿಸುವ ಬೆದರಿಕೆ ಒಡ್ಡಿದ್ದಾರೆ.  ‘ಬೆಟ್ಟದಲ್ಲಿ 21 ಆದಿವಾಸಿ ಕುಟುಂಬಗಳ ಪಟ್ಟಾ ಜಮೀನನ್ನು ಅರಣ್ಯ ಮತ್ತು ಕಂದಾಯ ಇಲಾಖೆಗಳು ಮುಟ್ಟುಗೋಲು ಹಾಕಿಕೊಂಡಿವೆ. ಸೋಲಿಗರ ಮೇಲೆ ದೂರು ದಾಖಲಿಸಲಾಗಿದೆ. ಇದರಿಂದ ಆರ್ಥಿಕ ವೆಚ್ಚ ಹೆಚ್ಚಾಗಿ ನ್ಯಾಯಾಲಯಕ್ಕೆ ಸುತ್ತಬೇಕಿದೆ. 11 ಬಾರಿ ದಾಖಲೆ ಸಲ್ಲಿಸುವುರಲ್ಲೇ ಸಮಯ ಕಳೆದಿದೆ. ಸೋಲಿಗರನ್ನು ಒಕ್ಕಲು ಎಬ್ಬಿಸಿಲು ಅರಣ್ಯ ಇಲಾಖೆ ಮುಂದಾಗಿದ್ದು ನಿಖರ ದಾಖಲೆ ಇಲ್ಲದ ಸೀಗೆಬೆಟ್ಟ ಮತ್ತು ಎಕರಕನಗದ್ದೆ ನಿವಾಸಿಗಳು ತೊಂದರೆಗೆ ಸಿಲುಕಿದ್ದಾರೆ. ಪೂರ್ವಿಕರ ಕಾಲದಿಂದ ಹಿಡುವಳಿ ಮಾಡುತ್ತ ಬಂದಿರುವ ಬುಡಕಟ್ಟು ಜನರಿಗೆ ತೊಂದರೆ ಉದ್ಭವಿಸಿದ್ದು ನ್ಯಾಯಯುತ ತೀರ್ಮಾನ ಬರದ ಕಾರಣ ಈ ಬಾರಿ ಮತದಾನ ಬಹಿಷ್ಕಾರ ಮಾಡಲಾಗುತ್ತದೆ’ ಎಂದು ಯರಕನಗದ್ದೆಯ ಮುಖಂಡರಾದ ಬಸವರಾಜು ಸಿದ್ಧೇಗೌಡ ಅಡುಗೆ ಜಡೇಗೌಡ ’ಪ್ರಜಾವಾಣಿ’ಗೆ ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT