<p><strong>ಚಾಮರಾಜನಗರ: </strong>ಜಿಲ್ಲೆಯಲ್ಲಿ ಶುಕ್ರವಾರ ಮೂವರು ಕೊರೊನಾ ವೈರಸ್ ಸೋಂಕಿತರು ಮೃತಪಟ್ಟಿದ್ದಾರೆ. ಒಬ್ಬರು ಕೋವಿಡ್ ಕಾರಣದಿಂದ ಮೃತಪಟ್ಟಿದ್ದರೆ, ಇನ್ನಿಬ್ಬರು ಬೇರೆ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.</p>.<p>ಇದರೊಂದಿಗೆ, ಸೋಂಕಿನ ಕಾರಣಕ್ಕೆ ಮೃತಪಟ್ಟವರ ಸಂಖ್ಯೆ 51ಕ್ಕೆ ಮತ್ತು ಕೋವಿಡ್ ದೃಢಪಟ್ಟಿದ್ದರೂ, ಬೇರೆ ಕಾರಣದಿಂದ ನಿಧನರಾದವರ ಸಂಖ್ಯೆ 22ಕ್ಕೆ ಏರಿದೆ.</p>.<p>ಗುಂಡ್ಲುಪೇಟೆ ತಾಲ್ಲೂಕು ಬೊಮ್ಮನಹಳ್ಳಿ ಗ್ರಾಮದ 70 ವರ್ಷದ ವೃದ್ಧ ಸೆ.16ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಸೆ.17ರಂದು ಮೃತಪಟ್ಟಿದ್ದಾರೆ. ಹೃದ್ರೋಗದಿಂದ ಬಳಲುತ್ತಿದ್ದ ನಗರದ 73 ವರ್ಷದ ವೃದ್ಧರೊಬ್ಬರು ಸೆ.16ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅವರು ನಿಧನರಾದ ನಂತರ ಪರೀಕ್ಷಿಸಿದಾಗ ಕೋವಿಡ್ ಇರುವುದು ದೃಢಪಟ್ಟಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಗರದ 58 ವರ್ಷದ ವ್ಯಕ್ತಿ ಸೆ.12ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದಾರೆ. ನಂತರ ಪರೀಕ್ಷಿಸಿದಾಗ ಕೋವಿಡ್ ದೃಢಪಟ್ಟಿದೆ.</p>.<p>ಹೊಸದಾಗಿ 68 ಪ್ರಕರಣಗಳು ವರದಿಯಾಗಿವೆ. 115 ಮಂದಿ ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ವರದಿಯಾದ ಪ್ರಕರಣಗಳ ಸಂಖ್ಯೆ 3,346ಕ್ಕೆ ಏರಿದೆ. 2,689 ಮಂದಿ ಗುಣಮುಖರಾಗಿದ್ದಾರೆ. 585 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ, 227 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. 25 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಶುಕ್ರವಾರ 393 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 327 ವರದಿ ನೆಗೆಟಿವ್ ಬಂದಿವೆ. 66 ಮಂದಿ ಸೋಂಕು ಇರುವುದು ಖಚಿತವಾಗಿದೆ. ಇನ್ನೆರಡು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.</p>.<p>ಸೋಂಕಿತ 68 ಮಂದಿಯಲ್ಲಿಚಾಮರಾಜನಗರ ತಾಲ್ಲೂಕಿನ 29, ಕೊಳ್ಳೇಗಾಲದ 19,ಗುಂಡ್ಲುಪೇಟೆಯ 11, ಹನೂರಿನ ನಾಲ್ವರು ಹಾಗೂ ಯಳಂದೂರು ತಾಲ್ಲೂಕಿನ ಇಬ್ಬರು ಮತ್ತು ಹೊರ ಜಿಲ್ಲೆಯ ಮೂವರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಜಿಲ್ಲೆಯಲ್ಲಿ ಶುಕ್ರವಾರ ಮೂವರು ಕೊರೊನಾ ವೈರಸ್ ಸೋಂಕಿತರು ಮೃತಪಟ್ಟಿದ್ದಾರೆ. ಒಬ್ಬರು ಕೋವಿಡ್ ಕಾರಣದಿಂದ ಮೃತಪಟ್ಟಿದ್ದರೆ, ಇನ್ನಿಬ್ಬರು ಬೇರೆ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.</p>.<p>ಇದರೊಂದಿಗೆ, ಸೋಂಕಿನ ಕಾರಣಕ್ಕೆ ಮೃತಪಟ್ಟವರ ಸಂಖ್ಯೆ 51ಕ್ಕೆ ಮತ್ತು ಕೋವಿಡ್ ದೃಢಪಟ್ಟಿದ್ದರೂ, ಬೇರೆ ಕಾರಣದಿಂದ ನಿಧನರಾದವರ ಸಂಖ್ಯೆ 22ಕ್ಕೆ ಏರಿದೆ.</p>.<p>ಗುಂಡ್ಲುಪೇಟೆ ತಾಲ್ಲೂಕು ಬೊಮ್ಮನಹಳ್ಳಿ ಗ್ರಾಮದ 70 ವರ್ಷದ ವೃದ್ಧ ಸೆ.16ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಸೆ.17ರಂದು ಮೃತಪಟ್ಟಿದ್ದಾರೆ. ಹೃದ್ರೋಗದಿಂದ ಬಳಲುತ್ತಿದ್ದ ನಗರದ 73 ವರ್ಷದ ವೃದ್ಧರೊಬ್ಬರು ಸೆ.16ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅವರು ನಿಧನರಾದ ನಂತರ ಪರೀಕ್ಷಿಸಿದಾಗ ಕೋವಿಡ್ ಇರುವುದು ದೃಢಪಟ್ಟಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಗರದ 58 ವರ್ಷದ ವ್ಯಕ್ತಿ ಸೆ.12ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದಾರೆ. ನಂತರ ಪರೀಕ್ಷಿಸಿದಾಗ ಕೋವಿಡ್ ದೃಢಪಟ್ಟಿದೆ.</p>.<p>ಹೊಸದಾಗಿ 68 ಪ್ರಕರಣಗಳು ವರದಿಯಾಗಿವೆ. 115 ಮಂದಿ ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ವರದಿಯಾದ ಪ್ರಕರಣಗಳ ಸಂಖ್ಯೆ 3,346ಕ್ಕೆ ಏರಿದೆ. 2,689 ಮಂದಿ ಗುಣಮುಖರಾಗಿದ್ದಾರೆ. 585 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ, 227 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. 25 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಶುಕ್ರವಾರ 393 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 327 ವರದಿ ನೆಗೆಟಿವ್ ಬಂದಿವೆ. 66 ಮಂದಿ ಸೋಂಕು ಇರುವುದು ಖಚಿತವಾಗಿದೆ. ಇನ್ನೆರಡು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.</p>.<p>ಸೋಂಕಿತ 68 ಮಂದಿಯಲ್ಲಿಚಾಮರಾಜನಗರ ತಾಲ್ಲೂಕಿನ 29, ಕೊಳ್ಳೇಗಾಲದ 19,ಗುಂಡ್ಲುಪೇಟೆಯ 11, ಹನೂರಿನ ನಾಲ್ವರು ಹಾಗೂ ಯಳಂದೂರು ತಾಲ್ಲೂಕಿನ ಇಬ್ಬರು ಮತ್ತು ಹೊರ ಜಿಲ್ಲೆಯ ಮೂವರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>