<p><strong>ಚಾಮರಾಜನಗರ: </strong>ಕೋವಿಡ್–19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೂಮಾಪನ ಇಲಾಖೆಯ ಮಹಿಳಾ ಸಿಬ್ಬಂದಿ, ಗುಂಡ್ಲುಪೇಟೆಯ ಒಬ್ಬರು ಮಹಿಳೆ ಹಾಗೂ ಮತ್ತೊಬ್ಬ ವ್ಯಕ್ತಿ ಸಂಪೂರ್ಣವಾಗಿ ಗುಣಮುಖಗೊಂಡು ಮನೆಗೆ ತೆರಳಿದ್ದಾರೆ.</p>.<p>ಜೂನ್ 22ರಲ್ಲಿ ಇವರಲ್ಲಿ ಸೋಂಕು ದೃಢಪಟ್ಟಿತ್ತು. 12 ದಿನಗಳ ಚಿಕಿತ್ಸೆಯ ನಂತರ ಅವರ ಗಂಟಲ ದ್ರವದ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನೂ 14 ದಿನಗಳ ಕಾಲ ಮೂವರೂ ಕಡ್ಡಾಯವಾಗಿ ಮನೆಯ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ.</p>.<p>ಕೋವಿಡ್ ಆಸ್ಪತ್ರೆಗೆ ದಾಖಲಾಗಿರುವ ಇನ್ನೂ 17 ಮಂದಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಅವರ ಗಂಟಲ ದ್ರವದ ಮಾದರಿ ಪರೀಕ್ಷೆಗೆ ವೈದ್ಯರು ಸಿದ್ಧತೆ ನಡೆಸಿದ್ದಾರೆ. ಸೋಮವಾರ ಇವರು ಮನೆಗೆ ತೆರಳುವ ಸಾಧ್ಯತೆ ಇದೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p>.<p class="Subhead">ಮತ್ತೆ ಐವರಲ್ಲಿ ದೃಢ: ಈ ಮಧ್ಯೆ, ಶನಿವಾರ ಜಿಲ್ಲೆಯಲ್ಲಿ ಐವರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇವರಲ್ಲಿ ಮೂವರು ಗುಂಡ್ಲುಪೇಟೆಯವರು. ಇನ್ನಿಬ್ಬರು ಚಾಮರಾಜನಗರದವರು. ನಾಲ್ಕು ಮಂದಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಗಳ ಸಂಪರ್ಕಿತರು. ಬೆಂಗಳೂರಿಗೆ ಹೋಗಿ ಬಂದಿರುವ 28 ವರ್ಷದ ಪುರುಷರೊಬ್ಬರೊಬ್ಬರು ಕೋವಿಡ್ಗೆ ತುತ್ತಾಗಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಇದರೊಂದಿಗೆ ಜಿಲ್ಲೆಯಲ್ಲಿ ದೃಢಪಟ್ಟ ಕೋವಿಡ್ ಪ್ರಕರಣಗಳ ಸಂಖ್ಯೆ 83ಕ್ಕೆ ಏರಿದೆ. ಇದುವರೆಗೆ ನಾಲ್ವರು ಗುಣಮುಖರಾಗಿದ್ದಾರೆ. ಸದ್ಯ 79 ಸಕ್ರಿಯ ಪ್ರಕರಣಗಳಿವೆ.</p>.<p class="Subhead">ಮನೆ ಕ್ವಾರಂಟೈನ್ನಲ್ಲಿ 839 ಮಂದಿ: ಕೋವಿಡ್–19ಗೆ ತುತ್ತಾಗಿರುವ ವ್ಯಕ್ತಿಗಳ 437 ಪ್ರಾಥಮಿಕ ಸಂಪರ್ಕಿತರು ಹಾಗೂ 402 ದ್ವಿತೀಯ ಸಂಪರ್ಕಿತರನ್ನು ಗುರುತಿಸಲಾಗಿದ್ದು, ಇವರನ್ನೆಲ್ಲ ಮನೆ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.</p>.<p>ಶನಿವಾರ ವೈದ್ಯಕೀಯ ಕಾಲೇಜಿನ ಕೋವಿಡ್ ಪರೀಕ್ಷಾ ಪ್ರಯೋಗಾಲಯದಲ್ಲಿ 416 ಮಂದಿಯ ಗಂಟಲ ದ್ರವ ಮಾದರಿಗಳ ಪರೀಕ್ಷೆ ನಡೆಸಲಾಗಿದ್ದು, 411 ಮಂದಿಯ ವರದಿಗಳು ನೆಗೆಟಿವ್ ಬಂದಿದೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಅವರ ಗಂಟಲ ದ್ರವದ ಮಾದರಿ ವರದಿ ನೆಗೆಟಿವ್ ಬಂದಿದೆ.</p>.<p>ಶನಿವಾರ 429 ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಒಟ್ಟು 1,034 ವರದಿಗಳು ಬರಬೇಕಿದೆ.</p>.<p class="Briefhead"><strong>ಇಂದು ಭಾನುವಾರದ ಲಾಕ್ಡೌನ್</strong></p>.<p>ಸರ್ಕಾರದ ನಿರ್ಧಾರದಂತೆ ಜಿಲ್ಲೆಯಲ್ಲೂ ಭಾನುವಾರ ಲಾಕ್ಡೌನ್ ಜಾರಿಯಲ್ಲಿರಲ್ಲಿದೆ. ಔಷಧ ಅಂಗಡಿಗಳು, ಆಸ್ಪತ್ರೆ, ಹಾಲು, ಪತ್ರಿಕೆ, ದಿನಸಿ ಸೇರಿದಂತೆ ಅವಶ್ಯಕ ವಸ್ತುಗಳ ಮಳಿಗೆಗಳನ್ನು ಬಿಟ್ಟು ಉಳಿದ ಎಲ್ಲ ಅಂಗಡಿ ಮುಂಗಟ್ಟುಗಳನ್ನು ತೆರೆಯುವುದಕ್ಕೆ ಅವಕಾಶ ಇಲ್ಲ.</p>.<p>ಕೆಎಸ್ಆರ್ಟಿಸಿ, ಖಾಸಗಿ ಬಸ್ಗಳು, ಆಟೊ, ಟಾಕ್ಸಿ ಸೇರಿದಂತೆ ಯಾವುದೇ ವಾಹನಗಳು ರಸ್ತೆಗೆ ಇಳಿಯುವುದಿಲ್ಲ. ಜನರು ಕೂಡ ಅನಗತ್ಯವಾಗಿ ಓಡಾಡುವುದಕ್ಕೆ ಅವಕಾಶ ಇಲ್ಲ.</p>.<p><strong>ಮಹದೇಶ್ವರ ಬೆಟ್ಟ ದರ್ಶನ ಇಲ್ಲ: </strong>ಲಾಕ್ಡೌನ್ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಭಕ್ತರಿಗೆ ಮಹದೇಶ್ವರಸ್ವಾಮಿಯ ದರ್ಶನಕ್ಕೆ ಅವಕಾಶ ಇಲ್ಲ. ದೇವಸ್ಥಾನದ ಮಟ್ಟಿಗೆ ಎಲ್ಲ ಪೂಜೆಗಳು ನಡೆಯಲಿವೆ ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಕೋವಿಡ್–19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೂಮಾಪನ ಇಲಾಖೆಯ ಮಹಿಳಾ ಸಿಬ್ಬಂದಿ, ಗುಂಡ್ಲುಪೇಟೆಯ ಒಬ್ಬರು ಮಹಿಳೆ ಹಾಗೂ ಮತ್ತೊಬ್ಬ ವ್ಯಕ್ತಿ ಸಂಪೂರ್ಣವಾಗಿ ಗುಣಮುಖಗೊಂಡು ಮನೆಗೆ ತೆರಳಿದ್ದಾರೆ.</p>.<p>ಜೂನ್ 22ರಲ್ಲಿ ಇವರಲ್ಲಿ ಸೋಂಕು ದೃಢಪಟ್ಟಿತ್ತು. 12 ದಿನಗಳ ಚಿಕಿತ್ಸೆಯ ನಂತರ ಅವರ ಗಂಟಲ ದ್ರವದ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನೂ 14 ದಿನಗಳ ಕಾಲ ಮೂವರೂ ಕಡ್ಡಾಯವಾಗಿ ಮನೆಯ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ.</p>.<p>ಕೋವಿಡ್ ಆಸ್ಪತ್ರೆಗೆ ದಾಖಲಾಗಿರುವ ಇನ್ನೂ 17 ಮಂದಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಅವರ ಗಂಟಲ ದ್ರವದ ಮಾದರಿ ಪರೀಕ್ಷೆಗೆ ವೈದ್ಯರು ಸಿದ್ಧತೆ ನಡೆಸಿದ್ದಾರೆ. ಸೋಮವಾರ ಇವರು ಮನೆಗೆ ತೆರಳುವ ಸಾಧ್ಯತೆ ಇದೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p>.<p class="Subhead">ಮತ್ತೆ ಐವರಲ್ಲಿ ದೃಢ: ಈ ಮಧ್ಯೆ, ಶನಿವಾರ ಜಿಲ್ಲೆಯಲ್ಲಿ ಐವರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇವರಲ್ಲಿ ಮೂವರು ಗುಂಡ್ಲುಪೇಟೆಯವರು. ಇನ್ನಿಬ್ಬರು ಚಾಮರಾಜನಗರದವರು. ನಾಲ್ಕು ಮಂದಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಗಳ ಸಂಪರ್ಕಿತರು. ಬೆಂಗಳೂರಿಗೆ ಹೋಗಿ ಬಂದಿರುವ 28 ವರ್ಷದ ಪುರುಷರೊಬ್ಬರೊಬ್ಬರು ಕೋವಿಡ್ಗೆ ತುತ್ತಾಗಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಇದರೊಂದಿಗೆ ಜಿಲ್ಲೆಯಲ್ಲಿ ದೃಢಪಟ್ಟ ಕೋವಿಡ್ ಪ್ರಕರಣಗಳ ಸಂಖ್ಯೆ 83ಕ್ಕೆ ಏರಿದೆ. ಇದುವರೆಗೆ ನಾಲ್ವರು ಗುಣಮುಖರಾಗಿದ್ದಾರೆ. ಸದ್ಯ 79 ಸಕ್ರಿಯ ಪ್ರಕರಣಗಳಿವೆ.</p>.<p class="Subhead">ಮನೆ ಕ್ವಾರಂಟೈನ್ನಲ್ಲಿ 839 ಮಂದಿ: ಕೋವಿಡ್–19ಗೆ ತುತ್ತಾಗಿರುವ ವ್ಯಕ್ತಿಗಳ 437 ಪ್ರಾಥಮಿಕ ಸಂಪರ್ಕಿತರು ಹಾಗೂ 402 ದ್ವಿತೀಯ ಸಂಪರ್ಕಿತರನ್ನು ಗುರುತಿಸಲಾಗಿದ್ದು, ಇವರನ್ನೆಲ್ಲ ಮನೆ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.</p>.<p>ಶನಿವಾರ ವೈದ್ಯಕೀಯ ಕಾಲೇಜಿನ ಕೋವಿಡ್ ಪರೀಕ್ಷಾ ಪ್ರಯೋಗಾಲಯದಲ್ಲಿ 416 ಮಂದಿಯ ಗಂಟಲ ದ್ರವ ಮಾದರಿಗಳ ಪರೀಕ್ಷೆ ನಡೆಸಲಾಗಿದ್ದು, 411 ಮಂದಿಯ ವರದಿಗಳು ನೆಗೆಟಿವ್ ಬಂದಿದೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಅವರ ಗಂಟಲ ದ್ರವದ ಮಾದರಿ ವರದಿ ನೆಗೆಟಿವ್ ಬಂದಿದೆ.</p>.<p>ಶನಿವಾರ 429 ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಒಟ್ಟು 1,034 ವರದಿಗಳು ಬರಬೇಕಿದೆ.</p>.<p class="Briefhead"><strong>ಇಂದು ಭಾನುವಾರದ ಲಾಕ್ಡೌನ್</strong></p>.<p>ಸರ್ಕಾರದ ನಿರ್ಧಾರದಂತೆ ಜಿಲ್ಲೆಯಲ್ಲೂ ಭಾನುವಾರ ಲಾಕ್ಡೌನ್ ಜಾರಿಯಲ್ಲಿರಲ್ಲಿದೆ. ಔಷಧ ಅಂಗಡಿಗಳು, ಆಸ್ಪತ್ರೆ, ಹಾಲು, ಪತ್ರಿಕೆ, ದಿನಸಿ ಸೇರಿದಂತೆ ಅವಶ್ಯಕ ವಸ್ತುಗಳ ಮಳಿಗೆಗಳನ್ನು ಬಿಟ್ಟು ಉಳಿದ ಎಲ್ಲ ಅಂಗಡಿ ಮುಂಗಟ್ಟುಗಳನ್ನು ತೆರೆಯುವುದಕ್ಕೆ ಅವಕಾಶ ಇಲ್ಲ.</p>.<p>ಕೆಎಸ್ಆರ್ಟಿಸಿ, ಖಾಸಗಿ ಬಸ್ಗಳು, ಆಟೊ, ಟಾಕ್ಸಿ ಸೇರಿದಂತೆ ಯಾವುದೇ ವಾಹನಗಳು ರಸ್ತೆಗೆ ಇಳಿಯುವುದಿಲ್ಲ. ಜನರು ಕೂಡ ಅನಗತ್ಯವಾಗಿ ಓಡಾಡುವುದಕ್ಕೆ ಅವಕಾಶ ಇಲ್ಲ.</p>.<p><strong>ಮಹದೇಶ್ವರ ಬೆಟ್ಟ ದರ್ಶನ ಇಲ್ಲ: </strong>ಲಾಕ್ಡೌನ್ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಭಕ್ತರಿಗೆ ಮಹದೇಶ್ವರಸ್ವಾಮಿಯ ದರ್ಶನಕ್ಕೆ ಅವಕಾಶ ಇಲ್ಲ. ದೇವಸ್ಥಾನದ ಮಟ್ಟಿಗೆ ಎಲ್ಲ ಪೂಜೆಗಳು ನಡೆಯಲಿವೆ ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>