<p><strong>ಚಾಮರಾಜನಗರ: </strong>ಜಿಲ್ಲೆಯಲ್ಲಿ ಗುರುವಾರ ಕೋವಿಡ್ –19 ದೃಢ ಪಟ್ಟ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಸೋಂಕಿನಿಂದಲೇ ಮೃತಪಟ್ಟಿದ್ದರೆ, ಮತ್ತೊಬ್ಬರು ಬೇರೆ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ.</p>.<p>ಮೈಸೂರು ಜಿಲ್ಲೆ ಗರ್ಗೇಶ್ವರಿ ನಿವಾಸಿ 57 ವರ್ಷದ ಮಹಿಳೆ ಸೆ.17ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಮೃತಪಟ್ಟಿದ್ದಾರೆ.</p>.<p>ಚಾಮರಾಜನಗರ ತಾಲ್ಲೂಕಿನ ನಡುಕಲು ಮೋಳೆ ಗ್ರಾಮದ 58 ವರ್ಷದ ಪುರುಷ ಸೆ.7ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಕೂಡ ಬುಧವಾರ ರಾತ್ರಿ ನಿಧನರಾಗಿದ್ದಾರೆ.</p>.<p>ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಚಾಮರಾಜನಗರ ತಾಲ್ಲೂಕು ಕಾಡಹಳ್ಳಿ ಗ್ರಾಮದ ನಿವಾಸಿ, 75 ವರ್ಷದ ವೃದ್ಧರೊಬ್ಬರು ಸೆ.5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ.</p>.<p>ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 57 ಹಾಗೂ ಸೋಂಕು ದೃಢಪಟ್ಟು, ಬೇರೆ ಅನಾರೋಗ್ಯದಿಂದ ಅಸುನೀಗಿದವರ ಸಂಖ್ಯೆ 26ಕ್ಕೆ ಏರಿದೆ. ಒಟ್ಟಾರೆ ಮೃತಪಟ್ಟ ಸೋಂಕಿತರ ಸಂಖ್ಯೆ 75ಕ್ಕೆ ತಲುಪಿದೆ.</p>.<p>ಹೊಸದಾಗಿ 62 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 25 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3,696ಕ್ಕೆ ಹಿಗ್ಗಿದೆ. 2,978ಮಂದಿ ಗುಣಮುಖರಾಗಿದ್ದಾರೆ. 633 ಸಕ್ರಿಯ ಪ್ರಕರಣಗಳಿವೆ. 294 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. 28 ಮಂದಿ ಐಸಿಯುನಲ್ಲಿದ್ದಾರೆ.</p>.<p>ಗುರುವಾರ 695 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಆರ್ಟಿಪಿಸಿಆರ್ 466, ರ್ಯಾಪಿಡ್ ಆ್ಯಂಟಿಜೆನ್ 174, ಟ್ರುನಾಟ್ 55 ಪರೀಕ್ಷೆಗಳು. 635 ಮಂದಿಯ ವರದಿ ನೆಗೆಟಿವ್ ಬಂದಿದೆ. 60 ಮಂದಿಗೆ ಸೋಂಕು ಖಚಿತವಾಗಿದೆ. ಇನ್ನೆರಡು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಜಿಲ್ಲೆಯಲ್ಲಿ ಗುರುವಾರ ಕೋವಿಡ್ –19 ದೃಢ ಪಟ್ಟ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಸೋಂಕಿನಿಂದಲೇ ಮೃತಪಟ್ಟಿದ್ದರೆ, ಮತ್ತೊಬ್ಬರು ಬೇರೆ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ.</p>.<p>ಮೈಸೂರು ಜಿಲ್ಲೆ ಗರ್ಗೇಶ್ವರಿ ನಿವಾಸಿ 57 ವರ್ಷದ ಮಹಿಳೆ ಸೆ.17ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಮೃತಪಟ್ಟಿದ್ದಾರೆ.</p>.<p>ಚಾಮರಾಜನಗರ ತಾಲ್ಲೂಕಿನ ನಡುಕಲು ಮೋಳೆ ಗ್ರಾಮದ 58 ವರ್ಷದ ಪುರುಷ ಸೆ.7ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಕೂಡ ಬುಧವಾರ ರಾತ್ರಿ ನಿಧನರಾಗಿದ್ದಾರೆ.</p>.<p>ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಚಾಮರಾಜನಗರ ತಾಲ್ಲೂಕು ಕಾಡಹಳ್ಳಿ ಗ್ರಾಮದ ನಿವಾಸಿ, 75 ವರ್ಷದ ವೃದ್ಧರೊಬ್ಬರು ಸೆ.5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ.</p>.<p>ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 57 ಹಾಗೂ ಸೋಂಕು ದೃಢಪಟ್ಟು, ಬೇರೆ ಅನಾರೋಗ್ಯದಿಂದ ಅಸುನೀಗಿದವರ ಸಂಖ್ಯೆ 26ಕ್ಕೆ ಏರಿದೆ. ಒಟ್ಟಾರೆ ಮೃತಪಟ್ಟ ಸೋಂಕಿತರ ಸಂಖ್ಯೆ 75ಕ್ಕೆ ತಲುಪಿದೆ.</p>.<p>ಹೊಸದಾಗಿ 62 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 25 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3,696ಕ್ಕೆ ಹಿಗ್ಗಿದೆ. 2,978ಮಂದಿ ಗುಣಮುಖರಾಗಿದ್ದಾರೆ. 633 ಸಕ್ರಿಯ ಪ್ರಕರಣಗಳಿವೆ. 294 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. 28 ಮಂದಿ ಐಸಿಯುನಲ್ಲಿದ್ದಾರೆ.</p>.<p>ಗುರುವಾರ 695 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಆರ್ಟಿಪಿಸಿಆರ್ 466, ರ್ಯಾಪಿಡ್ ಆ್ಯಂಟಿಜೆನ್ 174, ಟ್ರುನಾಟ್ 55 ಪರೀಕ್ಷೆಗಳು. 635 ಮಂದಿಯ ವರದಿ ನೆಗೆಟಿವ್ ಬಂದಿದೆ. 60 ಮಂದಿಗೆ ಸೋಂಕು ಖಚಿತವಾಗಿದೆ. ಇನ್ನೆರಡು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>