ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರಿಗೆ ಕೋವಿಡ್‌, ಮೂವರು ಗುಣಮುಖ

Last Updated 28 ಅಕ್ಟೋಬರ್ 2021, 16:20 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಮೂವರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಇಷ್ಟೇ ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

18 ಮಂದಿ ಸೋಂಕಿತರಿದ್ದಾರೆ. ಐಸಿಯುನಲ್ಲಿ ಯಾರೂ ಇಲ್ಲ. 10 ಮಂದಿ ಸೋಂಕಿತರು ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 32,559. ಗುಣಮುಖರಾದವರ ಸಂಖ್ಯೆಯೂ 32 ಸಾವಿರ ದಾಟಿದೆ. ಈವರೆಗೆ 32,002‌ ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಗುರುವಾರ 1,364 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 1,360 ವರದಿಗಳು ನೆಗೆಟಿವ್‌ ಬಂದಿವೆ. ನಾಲ್ವರಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಪೈಕಿ ಒಬ್ಬರು ಹೊರ ಜಿಲ್ಲೆಯವರು. ಜಿಲ್ಲೆಯ ಮೂವರಲ್ಲಿ ಇಬ್ಬರು ಚಾಮರಾಜನಗರ ತಾಲ್ಲೂಕಿನವರು. ಇನ್ನೊಬ್ಬರು ಗುಂಡ್ಲುಪೇಟೆ ತಾಲ್ಲೂಕಿನವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT