<p><strong>ಗುಂಡ್ಲುಪೇಟೆ: </strong>ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕೆಲವು ದಿನಗಳಿಂದ ಆತಂಕ ಸೃಷ್ಟಿಸಿರುವ ಹುಲಿಯ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಹುಂಡೀಪುರ, ಶಿವಪುರ, ಚೌಡಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಶುಕ್ರವಾರ ಶೋಧ ಕಾರ್ಯಾಚರಣೆ ನಡೆಸಿದರು. ಆದರೆ, ಹುಲಿ ಪತ್ತೆಯಾಗಲಿಲ್ಲ.</p>.<p>ಹುಲಿ ಕಾಣಿಸಿಕೊಂಡಿರುವ ಬಗ್ಗೆ ಗ್ರಾಮಸ್ಥರು ನೀಡಿದ ಮಾಹಿತಿಗಳನ್ನು ಆಧರಿಸಿ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಿ, ವ್ಯಾಘ್ರನ ಹೆಜ್ಜೆಗುರುತಿಗಾಗಿ ಹುಡುಕಾಡಿದರು.</p>.<p>ಬುಧವಾರ ಸಂಜೆಯಿಂದ ಗುರುವಾರ ಸಂಜೆಯವರೆಗೂ ಸಿಬ್ಬಂದಿ ತಂಡಗಳಗಾಗಿ ಹುಲಿ ಬರುವಿಕೆಗಾಗಿ ಕಾದು ಕುಳಿತಿದ್ದರು. ಹುಲಿಯನ್ನು ಸೆರೆ ಹಿಡಿಯಲು ಚಿಂತನೆ ನಡೆಸಿದ್ದರು.</p>.<p>ಶುಕ್ರವಾರ ಬೆಳಿಗ್ಗೆಯಿಂದ ಶೋಧ ಕಾರ್ಯಾಚರಣೆ ನಡೆಸಿದರೂ ಹುಲಿ ಪತ್ತೆಯಾಗಿಲ್ಲ. ಸಿಬ್ಬಂದಿ ಮೂರು ತಂಡಗಳಾಗಿ ವಿವಿಧ ಭಾಗಗಳಲ್ಲಿ ಹುಡುಕಾಟ ನಡೆಸಿದರು.</p>.<p>ರಾತ್ರಿ ಹೊತ್ತಿನಲ್ಲಿ ಹುಲಿ ಕಂಡು ಬರುವ ಸಾಧ್ಯತೆ ಇದೆ. ಗ್ರಾಮಸ್ಥರು ಕೂಡ ಇದೇ ಮಾತು ಹೇಳುತ್ತಿದ್ದಾರೆ. ಹಾಗಾಗಿ, ರಾತ್ರಿ ಇಲ್ಲೇ ಇದ್ದು ಕಾರ್ಯಾಚರಣೆ ನಡೆಸಲು ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ನವೀನ್ ಕುಮಾರ್ ತಿಳಿಸಿದರು.</p>.<p>ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಕುಮಾರ್, ವಲಯಾರಣ್ಯಾಧಿಕಾರಿ ನವೀನ್ ಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು.</p>.<p class="Subhead"><strong>ಅವೈಜ್ಞಾನಿಕ ಕಾರ್ಯಚರಣೆ: </strong>ಈ ಮಧ್ಯೆ, ಅರಣ್ಯ ಇಲಾಖೆಯವರು ಅವೈಜ್ಞಾನಿಕವಾಗಿ ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>‘ಹುಲಿ ಕಾರ್ಯಾಚರಣೆ ಮಾಡಬೇಕಾದರೆಒಬ್ಬರು ಶಾರ್ಪ್ ಶೂಟರ್ ಇರಬೇಕು. ವೈದ್ಯರು ಇರಬೇಕು. ಇಲ್ಲಿ ಯಾರೂ ಇಲ್ಲ. ಕೇವಲ ಸಿಬ್ಬಂದಿ ಆನೆಗಳೊಂದಿಗೆ ಬಂದು ಒಂದು ಸುತ್ತು ಹಾಕಿ ಆನೆಯನ್ನು ಮೇಯಲು ಬಿಟ್ಟು ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಾರೆ. ಕೇವಲ ಜನರನ್ನು ಮರುಳು ಮಾಡಲು ಈ ಕೆಲಸ ಮಾಡುತ್ತಿದ್ದಾರೆ’ ಎಂದು ಹುಂಡೀಪುರ ಗ್ರಾಮದ ಮಂಜುನಾಥ್ ಆರೋಪಿಸಿದರು.</p>.<p>‘ದಸರಾದಂತೆ ಆನೆಗಳನ್ನು ಮೆರವಣಿಗೆ ಮಾಡುತ್ತಾರೆ. ಹುಲಿ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸುತ್ತಿಲ್ಲ. ವೈಜ್ಞಾನಿಕವಾಗಿ ಕಾರ್ಯಾಚರಣೆ ಮಾಡುವುದಾದರೆ ಮಾಡಲಿ. ಇಲ್ಲವಾದರೆ ತೆರಳಲಿ’ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ: </strong>ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕೆಲವು ದಿನಗಳಿಂದ ಆತಂಕ ಸೃಷ್ಟಿಸಿರುವ ಹುಲಿಯ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಹುಂಡೀಪುರ, ಶಿವಪುರ, ಚೌಡಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಶುಕ್ರವಾರ ಶೋಧ ಕಾರ್ಯಾಚರಣೆ ನಡೆಸಿದರು. ಆದರೆ, ಹುಲಿ ಪತ್ತೆಯಾಗಲಿಲ್ಲ.</p>.<p>ಹುಲಿ ಕಾಣಿಸಿಕೊಂಡಿರುವ ಬಗ್ಗೆ ಗ್ರಾಮಸ್ಥರು ನೀಡಿದ ಮಾಹಿತಿಗಳನ್ನು ಆಧರಿಸಿ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಿ, ವ್ಯಾಘ್ರನ ಹೆಜ್ಜೆಗುರುತಿಗಾಗಿ ಹುಡುಕಾಡಿದರು.</p>.<p>ಬುಧವಾರ ಸಂಜೆಯಿಂದ ಗುರುವಾರ ಸಂಜೆಯವರೆಗೂ ಸಿಬ್ಬಂದಿ ತಂಡಗಳಗಾಗಿ ಹುಲಿ ಬರುವಿಕೆಗಾಗಿ ಕಾದು ಕುಳಿತಿದ್ದರು. ಹುಲಿಯನ್ನು ಸೆರೆ ಹಿಡಿಯಲು ಚಿಂತನೆ ನಡೆಸಿದ್ದರು.</p>.<p>ಶುಕ್ರವಾರ ಬೆಳಿಗ್ಗೆಯಿಂದ ಶೋಧ ಕಾರ್ಯಾಚರಣೆ ನಡೆಸಿದರೂ ಹುಲಿ ಪತ್ತೆಯಾಗಿಲ್ಲ. ಸಿಬ್ಬಂದಿ ಮೂರು ತಂಡಗಳಾಗಿ ವಿವಿಧ ಭಾಗಗಳಲ್ಲಿ ಹುಡುಕಾಟ ನಡೆಸಿದರು.</p>.<p>ರಾತ್ರಿ ಹೊತ್ತಿನಲ್ಲಿ ಹುಲಿ ಕಂಡು ಬರುವ ಸಾಧ್ಯತೆ ಇದೆ. ಗ್ರಾಮಸ್ಥರು ಕೂಡ ಇದೇ ಮಾತು ಹೇಳುತ್ತಿದ್ದಾರೆ. ಹಾಗಾಗಿ, ರಾತ್ರಿ ಇಲ್ಲೇ ಇದ್ದು ಕಾರ್ಯಾಚರಣೆ ನಡೆಸಲು ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ನವೀನ್ ಕುಮಾರ್ ತಿಳಿಸಿದರು.</p>.<p>ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಕುಮಾರ್, ವಲಯಾರಣ್ಯಾಧಿಕಾರಿ ನವೀನ್ ಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು.</p>.<p class="Subhead"><strong>ಅವೈಜ್ಞಾನಿಕ ಕಾರ್ಯಚರಣೆ: </strong>ಈ ಮಧ್ಯೆ, ಅರಣ್ಯ ಇಲಾಖೆಯವರು ಅವೈಜ್ಞಾನಿಕವಾಗಿ ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>‘ಹುಲಿ ಕಾರ್ಯಾಚರಣೆ ಮಾಡಬೇಕಾದರೆಒಬ್ಬರು ಶಾರ್ಪ್ ಶೂಟರ್ ಇರಬೇಕು. ವೈದ್ಯರು ಇರಬೇಕು. ಇಲ್ಲಿ ಯಾರೂ ಇಲ್ಲ. ಕೇವಲ ಸಿಬ್ಬಂದಿ ಆನೆಗಳೊಂದಿಗೆ ಬಂದು ಒಂದು ಸುತ್ತು ಹಾಕಿ ಆನೆಯನ್ನು ಮೇಯಲು ಬಿಟ್ಟು ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಾರೆ. ಕೇವಲ ಜನರನ್ನು ಮರುಳು ಮಾಡಲು ಈ ಕೆಲಸ ಮಾಡುತ್ತಿದ್ದಾರೆ’ ಎಂದು ಹುಂಡೀಪುರ ಗ್ರಾಮದ ಮಂಜುನಾಥ್ ಆರೋಪಿಸಿದರು.</p>.<p>‘ದಸರಾದಂತೆ ಆನೆಗಳನ್ನು ಮೆರವಣಿಗೆ ಮಾಡುತ್ತಾರೆ. ಹುಲಿ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸುತ್ತಿಲ್ಲ. ವೈಜ್ಞಾನಿಕವಾಗಿ ಕಾರ್ಯಾಚರಣೆ ಮಾಡುವುದಾದರೆ ಮಾಡಲಿ. ಇಲ್ಲವಾದರೆ ತೆರಳಲಿ’ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>