<p><strong>ಚಾಮರಾಜನಗರ:</strong> ‘ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಶಂಕಾಸ್ಪದವಾಗಿ ಮೃತಪಟ್ಟಿದ್ದ ಐದು ಹುಲಿಗಳ ದೇಹದಲ್ಲಿ ‘ಕಾರ್ಬೋಫ್ಯುರಾನ್’ ಕೀಟನಾಶಕ ಪತ್ತೆಯಾಗಿದೆ’ ಎಂದು ಉನ್ನತ ಮಟ್ಟದ ತನಿಖಾ ಸಮಿತಿ ಸದಸ್ಯ, ಸಿಸಿಎಫ್ ಟಿ.ಹೀರಾಲಾಲ್ ತಿಳಿಸಿದರು.</p>.<p>‘ಹುಲಿಗಳ ಸಾವಿಗೆ ಕಾರಣ ತಿಳಿಯಲು ಅಂಗಾಗಗಳ ಮಾದರಿಗಳನ್ನು ಎಫ್ಎಸ್ಎಲ್ ಹಾಗೂ ಇನ್ಸ್ಟಿಟ್ಯೂಟ್ ಆಫ್ ಅನಿಮಲ್ ಹೆಲ್ತ್ ಅಂಡ್ ವೆಟರ್ನರಿ ಬಯೋಲಾಜಿಕಲ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಕಾರ್ಬೋಫ್ಯುರಾನ್ ವಿಷದಿಂದ ಹುಲಿಗಳು ಮೃತಪಟ್ಟಿರುವುದು ದೃಢಪಟ್ಟಿದೆ’ ಎಂದು ಮಾಹಿತಿ ನೀಡಿದರು.</p>.<p>‘ಕಿಡಿಗೇಡಿಗಳು ಪ್ರತೀಕಾರಕ್ಕಾಗಿ ಜಾನುವಾರುಗಳ ಕಳೇಬರದ ಮೇಲೆ ವಾಸನೆ ರಹಿತವಾದ ಕಾರ್ಬೋಫ್ಯುರನ್ ವಿಷ ಸಿಂಪಡಿಸಿದ್ದರು. ಈ ಬಗ್ಗೆ ಸಮಿತಿಯು ಶೀಘ್ರ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಿದೆ’ ಎಂದು ಅವರು ಹೇಳಿದರು.</p><p><strong>ಎರಡು ಚಿರತೆಗಳ ಕಳೇಬರ ಪತ್ತೆ</strong></p><p>ಚನ್ನರಾಯಪಟ್ಟಣ (ಹಾಸನ): ತಾಲ್ಲೂಕಿನ ದಂಡಿಗನಹಳ್ಳಿ ಹೋಬಳಿ ಕತ್ತರಿಘಟ್ಟ ಗ್ರಾಮದ ಬಳಿ ಎರಡು ಚಿರತೆಗಳ ಕಳೇಬರ ಶನಿವಾರ ಪತ್ತೆಯಾಗಿದೆ.</p><p>ಗ್ರಾಮದ ಬಳಿ ರೈಲು ಹಳಿಯಿಂದ ಒಂದು ಮೀಟರ್ ದೂರದಲ್ಲಿ ಅಂದಾಜು ಮೂರೂವರೆ ವರ್ಷದ ಹೆಣ್ಣು ಚಿರತೆ ಕಳೇಬರ, ನಂತರದ 30 ಮೀಟರ್ ದೂರದಲ್ಲಿ ಒಂದೂವರೆ ವರ್ಷದ ಗಂಡು ಚಿರತೆ ಕಳೇಬರ ಪತ್ತೆಯಾಗಿದೆ.</p><p>ಚಿರತೆಗಳಿಗೆ ತಲೆ, ಭುಜದ ಭಾಗದಲ್ಲಿ ಗಾಯವಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅಂಗಾಂಗದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಶಂಕಾಸ್ಪದ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ‘ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಶಂಕಾಸ್ಪದವಾಗಿ ಮೃತಪಟ್ಟಿದ್ದ ಐದು ಹುಲಿಗಳ ದೇಹದಲ್ಲಿ ‘ಕಾರ್ಬೋಫ್ಯುರಾನ್’ ಕೀಟನಾಶಕ ಪತ್ತೆಯಾಗಿದೆ’ ಎಂದು ಉನ್ನತ ಮಟ್ಟದ ತನಿಖಾ ಸಮಿತಿ ಸದಸ್ಯ, ಸಿಸಿಎಫ್ ಟಿ.ಹೀರಾಲಾಲ್ ತಿಳಿಸಿದರು.</p>.<p>‘ಹುಲಿಗಳ ಸಾವಿಗೆ ಕಾರಣ ತಿಳಿಯಲು ಅಂಗಾಗಗಳ ಮಾದರಿಗಳನ್ನು ಎಫ್ಎಸ್ಎಲ್ ಹಾಗೂ ಇನ್ಸ್ಟಿಟ್ಯೂಟ್ ಆಫ್ ಅನಿಮಲ್ ಹೆಲ್ತ್ ಅಂಡ್ ವೆಟರ್ನರಿ ಬಯೋಲಾಜಿಕಲ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಕಾರ್ಬೋಫ್ಯುರಾನ್ ವಿಷದಿಂದ ಹುಲಿಗಳು ಮೃತಪಟ್ಟಿರುವುದು ದೃಢಪಟ್ಟಿದೆ’ ಎಂದು ಮಾಹಿತಿ ನೀಡಿದರು.</p>.<p>‘ಕಿಡಿಗೇಡಿಗಳು ಪ್ರತೀಕಾರಕ್ಕಾಗಿ ಜಾನುವಾರುಗಳ ಕಳೇಬರದ ಮೇಲೆ ವಾಸನೆ ರಹಿತವಾದ ಕಾರ್ಬೋಫ್ಯುರನ್ ವಿಷ ಸಿಂಪಡಿಸಿದ್ದರು. ಈ ಬಗ್ಗೆ ಸಮಿತಿಯು ಶೀಘ್ರ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಿದೆ’ ಎಂದು ಅವರು ಹೇಳಿದರು.</p><p><strong>ಎರಡು ಚಿರತೆಗಳ ಕಳೇಬರ ಪತ್ತೆ</strong></p><p>ಚನ್ನರಾಯಪಟ್ಟಣ (ಹಾಸನ): ತಾಲ್ಲೂಕಿನ ದಂಡಿಗನಹಳ್ಳಿ ಹೋಬಳಿ ಕತ್ತರಿಘಟ್ಟ ಗ್ರಾಮದ ಬಳಿ ಎರಡು ಚಿರತೆಗಳ ಕಳೇಬರ ಶನಿವಾರ ಪತ್ತೆಯಾಗಿದೆ.</p><p>ಗ್ರಾಮದ ಬಳಿ ರೈಲು ಹಳಿಯಿಂದ ಒಂದು ಮೀಟರ್ ದೂರದಲ್ಲಿ ಅಂದಾಜು ಮೂರೂವರೆ ವರ್ಷದ ಹೆಣ್ಣು ಚಿರತೆ ಕಳೇಬರ, ನಂತರದ 30 ಮೀಟರ್ ದೂರದಲ್ಲಿ ಒಂದೂವರೆ ವರ್ಷದ ಗಂಡು ಚಿರತೆ ಕಳೇಬರ ಪತ್ತೆಯಾಗಿದೆ.</p><p>ಚಿರತೆಗಳಿಗೆ ತಲೆ, ಭುಜದ ಭಾಗದಲ್ಲಿ ಗಾಯವಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅಂಗಾಂಗದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಶಂಕಾಸ್ಪದ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>