<p><strong>ಹನೂರು (ಚಾಮರಾಜನಗರ ಜಿಲ್ಲೆ):</strong> ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಹುಲಿ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಪಚ್ಚೆಮಲ್ಲು, ಗಣೇಶ್, ಗೋವಿಂದೇಗೌಡ ಹಾಗೂ ಶಂಪು ಬಂಧಿತರು. ಆರೋಪಿಗಳನ್ನು ಭಾನುವಾರ ಕೊಳ್ಳೇಗಾಲದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಜೆಎಂಎಫ್ಸಿ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಧೀಶರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದರು.</p>.<h2>ಪ್ರತೀಕಾರದ ಹತ್ಯೆ:</h2>.<p>‘ಕಾಡಿನಲ್ಲಿ ಮೇಯಲು ಹೋಗಿದ್ದ ಹಸುವನ್ನು ತಿಂದು ಹಾಕಿದ್ದಕ್ಕೆ ಪ್ರತೀಕಾರವಾಗಿ ಹುಲಿಗೆ ವಿಷಹಾಕಿ ಹತ್ಯೆ ಮಾಡಲಾಗಿದೆ’ ಎಂಬುದು ತನಿಖೆಯಿಂದ ತಿಳಿದುಬಂದಿದೆ.</p>.<p>‘ಹುಲಿ ಸತ್ತ ಬಳಿಕ ಪ್ರಕರಣ ಮುಚ್ಚಿಹಾಕಲು ಆರೋಪಿಗಳು ಕಳೇಬರವನ್ನು ಮೂರು ತುಂಡುಗಳಾಗಿ ಕತ್ತರಿಸಿ ಮುಚ್ಚಿಡಲು ಯತ್ನಿಸಿದ್ದರು’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಜುಲೈ 26ರಂದು ಇದೇ ಅರಣ್ಯದಲ್ಲಿ ಹಸು ಕೊಂದಿದ್ದಕ್ಕೆ ಪ್ರತೀಕಾರವಾಗಿ ಐದು ಹುಲಿಗಳಿಗೆ ವಿಷವಿಕ್ಕಿ ಹತ್ಯೆ ಮಾಡಲಾಗಿತ್ತು. ಇದೀಗ ಅದೇ ಮಾದರಿಯಲ್ಲಿ ಹುಲಿ ಹತ್ಯೆ ನಡೆದಿದೆ.</p>.<p>‘ಈ ಪ್ರಕರಣದಲ್ಲಿ ಹಲವರ ಕೈವಾಡದ ಶಂಕೆ ಇದ್ದು, ಅವರ ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು (ಚಾಮರಾಜನಗರ ಜಿಲ್ಲೆ):</strong> ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಹುಲಿ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಪಚ್ಚೆಮಲ್ಲು, ಗಣೇಶ್, ಗೋವಿಂದೇಗೌಡ ಹಾಗೂ ಶಂಪು ಬಂಧಿತರು. ಆರೋಪಿಗಳನ್ನು ಭಾನುವಾರ ಕೊಳ್ಳೇಗಾಲದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಜೆಎಂಎಫ್ಸಿ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಧೀಶರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದರು.</p>.<h2>ಪ್ರತೀಕಾರದ ಹತ್ಯೆ:</h2>.<p>‘ಕಾಡಿನಲ್ಲಿ ಮೇಯಲು ಹೋಗಿದ್ದ ಹಸುವನ್ನು ತಿಂದು ಹಾಕಿದ್ದಕ್ಕೆ ಪ್ರತೀಕಾರವಾಗಿ ಹುಲಿಗೆ ವಿಷಹಾಕಿ ಹತ್ಯೆ ಮಾಡಲಾಗಿದೆ’ ಎಂಬುದು ತನಿಖೆಯಿಂದ ತಿಳಿದುಬಂದಿದೆ.</p>.<p>‘ಹುಲಿ ಸತ್ತ ಬಳಿಕ ಪ್ರಕರಣ ಮುಚ್ಚಿಹಾಕಲು ಆರೋಪಿಗಳು ಕಳೇಬರವನ್ನು ಮೂರು ತುಂಡುಗಳಾಗಿ ಕತ್ತರಿಸಿ ಮುಚ್ಚಿಡಲು ಯತ್ನಿಸಿದ್ದರು’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಜುಲೈ 26ರಂದು ಇದೇ ಅರಣ್ಯದಲ್ಲಿ ಹಸು ಕೊಂದಿದ್ದಕ್ಕೆ ಪ್ರತೀಕಾರವಾಗಿ ಐದು ಹುಲಿಗಳಿಗೆ ವಿಷವಿಕ್ಕಿ ಹತ್ಯೆ ಮಾಡಲಾಗಿತ್ತು. ಇದೀಗ ಅದೇ ಮಾದರಿಯಲ್ಲಿ ಹುಲಿ ಹತ್ಯೆ ನಡೆದಿದೆ.</p>.<p>‘ಈ ಪ್ರಕರಣದಲ್ಲಿ ಹಲವರ ಕೈವಾಡದ ಶಂಕೆ ಇದ್ದು, ಅವರ ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>