<p><strong>ಚಾಮರಾಜನಗರ:</strong> ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ಈಚೆಗೆ ಐದು ಹುಲಿಗಳಿಗೆ ವಿಷವಿಕ್ಕಿ ಕೊಂದ ಆರೋಪದ ಮೇಲೆ ಜೈಲಿನಲ್ಲಿದ್ದ ಆರೋಪಿಗಳಾದ ಮಾದರಾಜು, ನಾಗರಾಜು, ಕೋನಪ್ಪಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಕೊಳ್ಳೇಗಾಲ) ಜಾಮೀನು ಮಂಜೂರು ಮಾಡಿದೆ.</p><p>₹50,000 ಭದ್ರತಾ ಠೇವಣಿಯೊಂದಿಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ ಅನುಮತಿ ಪಡೆಯದೆ ಸ್ವಸ್ಥಾನ ತೊರೆಯುವಂತಿಲ್ಲ, ನ್ಯಾಯಾಲಯದಲ್ಲಿ ನಿಯಮಿತವಾಗಿ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತು ವಿಧಿಸಿದೆ.</p><p><strong>ಮನವಿ:</strong></p><p>ಮತ್ತೊಂದೆಡೆ ಹುಲಿಗಳ ಅಸಹಜ ಸಾವಿನ ತನಿಖೆ ಪೂರ್ಣಗೊಳಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಸರ್ಕಾರಿ ಅಭಿಯೋಜಕರ ಮೂಲಕ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದು ಮಲೆ ಮಹದೇಶ್ವರ ವನ್ಯಜೀವಿ ವಿಭಾದ ಡಿಸಿಎಫ್ ಭಾಸ್ಕರ್ ತಿಳಿಸಿದ್ದಾರೆ.</p>.ಚಾಮರಾಜನಗರ | ಚಿರತೆಗೆ ವಿಷಪ್ರಾಶನ ಶಂಕೆ: ಆರೋಪಿ ವಶಕ್ಕೆ.ಚಾಮರಾಜನಗರ | ಚಿರತೆ ಕಳೇಬರ ಪತ್ತೆ: ವಿಷಪ್ರಾಶನ ಶಂಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ಈಚೆಗೆ ಐದು ಹುಲಿಗಳಿಗೆ ವಿಷವಿಕ್ಕಿ ಕೊಂದ ಆರೋಪದ ಮೇಲೆ ಜೈಲಿನಲ್ಲಿದ್ದ ಆರೋಪಿಗಳಾದ ಮಾದರಾಜು, ನಾಗರಾಜು, ಕೋನಪ್ಪಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಕೊಳ್ಳೇಗಾಲ) ಜಾಮೀನು ಮಂಜೂರು ಮಾಡಿದೆ.</p><p>₹50,000 ಭದ್ರತಾ ಠೇವಣಿಯೊಂದಿಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ ಅನುಮತಿ ಪಡೆಯದೆ ಸ್ವಸ್ಥಾನ ತೊರೆಯುವಂತಿಲ್ಲ, ನ್ಯಾಯಾಲಯದಲ್ಲಿ ನಿಯಮಿತವಾಗಿ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತು ವಿಧಿಸಿದೆ.</p><p><strong>ಮನವಿ:</strong></p><p>ಮತ್ತೊಂದೆಡೆ ಹುಲಿಗಳ ಅಸಹಜ ಸಾವಿನ ತನಿಖೆ ಪೂರ್ಣಗೊಳಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಸರ್ಕಾರಿ ಅಭಿಯೋಜಕರ ಮೂಲಕ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದು ಮಲೆ ಮಹದೇಶ್ವರ ವನ್ಯಜೀವಿ ವಿಭಾದ ಡಿಸಿಎಫ್ ಭಾಸ್ಕರ್ ತಿಳಿಸಿದ್ದಾರೆ.</p>.ಚಾಮರಾಜನಗರ | ಚಿರತೆಗೆ ವಿಷಪ್ರಾಶನ ಶಂಕೆ: ಆರೋಪಿ ವಶಕ್ಕೆ.ಚಾಮರಾಜನಗರ | ಚಿರತೆ ಕಳೇಬರ ಪತ್ತೆ: ವಿಷಪ್ರಾಶನ ಶಂಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>