ಪ್ರತಿಭಟನೆ: ತಕ್ಷಣವೇ ಅಲ್ಲಿದ್ದವರು, ಶಿವಕುಮಾರ್ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆ ಹೊತ್ತಿಗಾಗಲೇ ಅವರು ಮೃತಪಟ್ಟಿದ್ದರು ಎಂದು ಗೊತ್ತಾಗಿದೆ. ಸ್ಥಳದಲ್ಲೇ ಮೃತಪಟ್ಟಿದ್ದರೂ, ಶಿವಕುಮಾರ್ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿದ್ದನ್ನು ಖಂಡಿಸಿ ಅವರ ಸಂಬಂಧಿಕರು ಜಿಲ್ಲಾಸ್ಪತ್ರೆ ಮುಂದೆರಾತ್ರಿ ಪ್ರತಿಭಟನೆ ನಡೆಸಿದರು. ಕ್ವಾರಿ ಮಾಲೀಕರು ಸ್ಥಳಕ್ಕೆ ಬಂದು, ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.