ನಂತರ ಮಾತನಾಡಿದ ಅವರು, ‘ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ಸ್ವಾತಂತ್ರ್ಯ ವೀರ, ಮೈಸೂರು ಹುಲಿ ಟಿಪ್ಪು ಸುಲ್ತಾನ್. ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು. ಟಿಪ್ಪು ಆಡಳಿತವನ್ನುಜಗತ್ತೇ ಮೆಚ್ಚಿತ್ತು. ತನ್ನ ರಾಜ್ಯದ ಸುಭಿಕ್ಷೆಗಾಗಿ ದುಡಿದ ಮಹಾನ್ ಆಡಳಿತಗಾರ. ರೇಷ್ಮೆ ಕೃಷಿಗೆ ಉತ್ತೇಜನ ನೀಡಿದ್ದರು. ಬ್ರಿಟಿಷರ ಕಾಯ್ದೆಗಳ ವಿರುದ್ಧ ಧ್ವನಿ ಎತ್ತಿ, ಪದೇ ಪದೇ ಅವರ ಮೇಲೆ ಯುದ್ಧ ಮಾಡಿ ಜಯ ಗಳಿಸುತ್ತಿದ್ದ ಟಿಪ್ಪುವಿನ ಬಗ್ಗೆ ಬ್ರಿಟಿಷ್ ಆಡಳಿತಗಾರರಿಗೆ ಭಯ ಇತ್ತು. ಇಂಥ ಮಹಾನ್ ಹೋರಾಟಗಾರನ ಜಯಂತಿ ಆಚರಿಸುವುದು ನಮ್ಮೆಲ್ಲರ ಪುಣ್ಯ’ ಎಂದರು.