<p><strong>ಚಾಮರಾಜನಗರ:</strong> ತಾಲ್ಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಮಂಜು ಎಂಬ ರೈತರು ಬೆಳೆದಿದ್ದ ಟೊಮೆಟೊ ಬೆಳೆಯನ್ನು ದುಷ್ಕರ್ಮಿಗಳು ಬುಧವಾರ ರಾತ್ರಿ ನಾಶ ಮಾಡಿದ್ದಾರೆ.</p><p>ಗಿಡಗಳಲ್ಲಿ ಟೊಮೆಟೊ ಫಸಲು ಬಂದಿದ್ದು, ಇನ್ನು ಏಳೆಂಟು ದಿನಗಳಲ್ಲಿ ಕಟಾವು ಮಾಡಬಹುದಿತ್ತು. ಮಂಜು ಎರಡು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು. ಒಂದು ಎಕರೆಯಲ್ಲಿ ಬೆಳೆದಿದ್ದ ಟೊಮೆಟೊ ಗಿಡಗಳ ಬುಡವನ್ನು ಕತ್ತರಿಸಿದ್ದಾರೆ. ದ್ವೇಷ ಇಲ್ಲವೇ ಹೊಟ್ಟೆಕಿಚ್ಚಿನಿಂದ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.</p><p>ಈಗಿನ ಬೆಲೆಯಲ್ಲಿ ಟೊಮೆಟೊ ಮಾರಾಟ ಮಾಡಿದ್ದರೆ ₹ 15 ಲಕ್ಷದಿಂದ ₹ 20 ಲಕ್ಷದವರೆಗೆ ಆದಾಯ ಬರುತ್ತಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p><p>‘ಎರಡು ಲಕ್ಷ ರೂಪಾಯಿ ಖರ್ಚು ಮಾಡಿದ್ದೆ. ದುಡ್ಡು ಹೊಂದಿಸಲು ಚಿನ್ನ ಅಡವಿಟ್ಟಿದ್ದೆ. ಸಂಘಗಳಲ್ಲಿ ಸಾಲ ಮಾಡಿದ್ದೆ. ವ್ಯಾಪಾರಿಗಳು ಬಂದು ಟೊಮೆಟೊವನ್ನು ಪರಿಶೀಲಿಸಿದ್ದರು. ಇನ್ನು ಕೆಲವೇ ದಿನಗಳಲ್ಲಿ ಕಟಾವು ಮಾಡುತ್ತಿದ್ದೆವು. ಬುಧವಾರ ರಾತ್ರಿ ಒಂಬತ್ತು ಗಂಟೆವರೆಗೂ ತೋಟದಲ್ಲೇ ಇದ್ದೆ. ಆ ನಂತರ ಮನೆಗೆ ತೆರಳಿದೆ. ಬೆಳಿಗ್ಗೆ ಬಂದು ನೋಡುವಾಗ ಗಿಡಗಳು ಬಾಡಿವೆ. ನೋಡಿದರೆ ಗಿಡಗಳನ್ನು ಕತ್ತರಿಸಲಾಗಿದೆ. ಯಾರೋ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ’ ಎಂದು ರೈತ ಮಂಜುನಾಥ್ ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡರು. </p><p>‘ಈಗ ಟೊಮೆಟೊಗೆ ಉತ್ತಮ ಬೆಲೆ ಇದ್ದು ₹ 20 ಲಕ್ಷದಷ್ಟು ಬರಬಹುದು ಎಂದುಕೊಂಡಿದ್ದೆ. ಎಲ್ಲವೂ ಹಾಳಾಗಿದೆ. ನನಗೆ ಪರಿಹಾರ ನೀಡಬೇಕು. ಇಲ್ಲದಿದ್ದರೆ ನೇಣು ಹಾಕಿಕೊಳ್ಳಬೇಕಾಗುತ್ತದೆ’ ಎಂದು ಮಂಜು ಹೇಳಿದರು.</p><p>ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಲ್ಲಿನ ಪ್ರಭಾರ ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಶ್ವಾನ ದಳವೂ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದೆ.</p><p>‘ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ದೂರು ದಾಖಲಿಸಲಾಗಿದೆ. ಒಂದು ಎಕರೆಯಷ್ಟು ಟೊಮೆಟೊ ಬೆಳೆ ನಾಶವಾಗಿದೆ. ತನಿಖೆ ಆರಂಭಿಸಿದ್ದೇವೆ’ ಎಂದು ಪ್ರಭಾರ ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ತಾಲ್ಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಮಂಜು ಎಂಬ ರೈತರು ಬೆಳೆದಿದ್ದ ಟೊಮೆಟೊ ಬೆಳೆಯನ್ನು ದುಷ್ಕರ್ಮಿಗಳು ಬುಧವಾರ ರಾತ್ರಿ ನಾಶ ಮಾಡಿದ್ದಾರೆ.</p><p>ಗಿಡಗಳಲ್ಲಿ ಟೊಮೆಟೊ ಫಸಲು ಬಂದಿದ್ದು, ಇನ್ನು ಏಳೆಂಟು ದಿನಗಳಲ್ಲಿ ಕಟಾವು ಮಾಡಬಹುದಿತ್ತು. ಮಂಜು ಎರಡು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು. ಒಂದು ಎಕರೆಯಲ್ಲಿ ಬೆಳೆದಿದ್ದ ಟೊಮೆಟೊ ಗಿಡಗಳ ಬುಡವನ್ನು ಕತ್ತರಿಸಿದ್ದಾರೆ. ದ್ವೇಷ ಇಲ್ಲವೇ ಹೊಟ್ಟೆಕಿಚ್ಚಿನಿಂದ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.</p><p>ಈಗಿನ ಬೆಲೆಯಲ್ಲಿ ಟೊಮೆಟೊ ಮಾರಾಟ ಮಾಡಿದ್ದರೆ ₹ 15 ಲಕ್ಷದಿಂದ ₹ 20 ಲಕ್ಷದವರೆಗೆ ಆದಾಯ ಬರುತ್ತಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p><p>‘ಎರಡು ಲಕ್ಷ ರೂಪಾಯಿ ಖರ್ಚು ಮಾಡಿದ್ದೆ. ದುಡ್ಡು ಹೊಂದಿಸಲು ಚಿನ್ನ ಅಡವಿಟ್ಟಿದ್ದೆ. ಸಂಘಗಳಲ್ಲಿ ಸಾಲ ಮಾಡಿದ್ದೆ. ವ್ಯಾಪಾರಿಗಳು ಬಂದು ಟೊಮೆಟೊವನ್ನು ಪರಿಶೀಲಿಸಿದ್ದರು. ಇನ್ನು ಕೆಲವೇ ದಿನಗಳಲ್ಲಿ ಕಟಾವು ಮಾಡುತ್ತಿದ್ದೆವು. ಬುಧವಾರ ರಾತ್ರಿ ಒಂಬತ್ತು ಗಂಟೆವರೆಗೂ ತೋಟದಲ್ಲೇ ಇದ್ದೆ. ಆ ನಂತರ ಮನೆಗೆ ತೆರಳಿದೆ. ಬೆಳಿಗ್ಗೆ ಬಂದು ನೋಡುವಾಗ ಗಿಡಗಳು ಬಾಡಿವೆ. ನೋಡಿದರೆ ಗಿಡಗಳನ್ನು ಕತ್ತರಿಸಲಾಗಿದೆ. ಯಾರೋ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ’ ಎಂದು ರೈತ ಮಂಜುನಾಥ್ ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡರು. </p><p>‘ಈಗ ಟೊಮೆಟೊಗೆ ಉತ್ತಮ ಬೆಲೆ ಇದ್ದು ₹ 20 ಲಕ್ಷದಷ್ಟು ಬರಬಹುದು ಎಂದುಕೊಂಡಿದ್ದೆ. ಎಲ್ಲವೂ ಹಾಳಾಗಿದೆ. ನನಗೆ ಪರಿಹಾರ ನೀಡಬೇಕು. ಇಲ್ಲದಿದ್ದರೆ ನೇಣು ಹಾಕಿಕೊಳ್ಳಬೇಕಾಗುತ್ತದೆ’ ಎಂದು ಮಂಜು ಹೇಳಿದರು.</p><p>ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಲ್ಲಿನ ಪ್ರಭಾರ ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಶ್ವಾನ ದಳವೂ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದೆ.</p><p>‘ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ದೂರು ದಾಖಲಿಸಲಾಗಿದೆ. ಒಂದು ಎಕರೆಯಷ್ಟು ಟೊಮೆಟೊ ಬೆಳೆ ನಾಶವಾಗಿದೆ. ತನಿಖೆ ಆರಂಭಿಸಿದ್ದೇವೆ’ ಎಂದು ಪ್ರಭಾರ ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>