ದೇವಸ್ಥಾನದ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಈಗಾಗಲೇ ದೇವಾಲಯವನ್ನು ತಳಿರುತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.
ಈ ಕಾರ್ಯಕ್ರಮದ ಸಾನಿಧ್ಯವನ್ನು ಪಡಗೂರು ಅಡವಿ ಮಠಾಧ್ಯಕ್ಷರಾದ ಶಿವಲಿಂಗೇಂದ್ರಮಹಾಸ್ವಾಮಿಗಳು ವಹಿಸಲಿದ್ದು, ಪಟ್ಟಣದ ಭಾವಸಾರ್ ಕ್ಷತ್ರಿಯ ಸಮಾಜದ ಅಧ್ಯಕ್ಷ ವಿ.ಕೆ.ಶಂಕರ್ರಾವ್ ವಾದೋನೆ ನೇತೃತ್ವದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಎಚ್.ಎಂ.ಗಣೇಶ್ಪ್ರಸಾದ್, ಮುಖಂಡ ಸಿ.ಎಸ್.ನಿರಂಜನಕುಮಾರ್, ವೀರಶೈವ ಮಹಾಸಭಾ ಅಧ್ಯಕ್ಷ ನಂಜಪ್ಪ, ಮುಖಂಡ ಪಿ.ಗಿರೀಶ್, ಮೈಸೂರು ಭಾವಸಾರ ಕ್ಷತ್ರಿಯ ಮಂಡಲಿ ಅಧ್ಯಕ್ಷ ಆರ್.ವಿ.ಶಿವಾಜಿರಾವ್ ರಂಪೂರೆ ಸೇರಿ ಭಾವಸಾರ ಕ್ಷತ್ರಿಯ ಚಾಮುಂಡೇಶ್ವರಿ ದೇವಸ್ಥಾನ ಸಮಿತಿ ಮತ್ತು ಭಾವಸಾರ ಕ್ಷತ್ರಿಯ ಸಮಾಜದವರು ಭಾಗವಹಿಸುವರು.