ಕಾಂಗ್ರೆಸ್ ಧುರೀಣ ಮಹದೇವ ಪ್ರಸಾದ್ ಅವರ ಕಟ್ಟಾ ಬೆಂಬಲಿಗರಾಗಿದ್ದ ಆರ್. ಮಹೇಶ್ ಅವರು ಈ ಮುನ್ನ ಇದೇ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದಿದ್ದರು. ಆದರೆ, ಮಹದೇವ ಪ್ರಸಾದ್ ಅವರ ನಿಧನದ ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಆ ನಂತರ ತಾಲ್ಲೂಕು ಪಂಚಾಯಿತಿ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ಹೀಗಾಗಿ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಬೇಕಾದ ಪ್ರಮೇಯ ಎದುರಾಗಿದೆ.