ದಂಡ ವಿಧಿಸಿದ ಸಿಬ್ಬಂದಿ: ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ವಲಯ ಅರಣ್ಯ ಅಧಿಕಾರಿ ಲೋಕೇಶ್ ಮೂರ್ತಿ, ‘ಸೋಮವಾರ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ಸಿಬ್ಬಂದಿ ಗಮನಕ್ಕೆ ಬರುತ್ತಿದ್ದಂತೆಯೇ ಪ್ರವಾಸಿಗರನ್ನು ವಿಚಾರಣೆ ಮಾಡಿ, ದಂಡ ವಿಧಿಸಲಾಗಿದೆ. ಬಿಆರ್ಟಿಯಲ್ಲಿ ಹಾದು ಹೋಗುವ ರಸ್ತೆಯಲ್ಲಿ ದಾರಿ ಮಧ್ಯೆ ವಾಹನಗಳನ್ನು ನಿಲ್ಲಿಸುವುದಕ್ಕೆ, ಜನರು ಕೆಳಗೆ ಇಳಿಯುವುದಕ್ಕೆ ಅವಕಾಶ ಇಲ್ಲ. ಸಿಬ್ಬಂದಿ ಗಸ್ತು ತಿರುಗುತ್ತಿರುತ್ತಾರೆ’ ಎಂದು ಹೇಳಿದರು.