‘ತಾತ್ಕಾಲಿಕವಾಗಿ ಲೋಕೋಪಯೋಗಿ ಇಲಾಖೆಯ ಹಳೆಯ ಕಟ್ಟಡಕ್ಕೆ ಠಾಣೆಯನ್ನು ಸ್ಥಳಾಂತರಗೊಳಿಸಲಾಗುತ್ತಿದೆ. ಅರ್ಧದಷ್ಟು ಸಾಮಾನುಗಳನ್ನು ಸ್ಥಳಾಂತರಿಸಲಾಗಿದೆ. ಇದು ಹಳೆಯ ಕಟ್ಟಡವಾಗಿದ್ದರಿಂದ ಮಳೆಯ ಸಂದರ್ಭದಲ್ಲಿ ಭಾರಿ ಸಮಸ್ಯೆಯಾಗುತ್ತಿದೆ. ಇನ್ನು ಎರಡು ದಿನ ಹೀಗೆ ಮಳೆ ಬಂದರೆ, ಕೆಲಸ ಮಾಡುವುದಕ್ಕೇ ಕಷ್ಟವಾಗುತ್ತಿತ್ತು’ ಎಂದು ಪೊಲೀಸ್ ಇನ್ಸ್ಪೆಕ್ಟರ್ ಎನ್.ಸಿ.ನಾಗೇಗೌಡ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.