‘ಗಿರಿಜನರಲ್ಲಿ ಅರಿವಿನ ಕೊರತೆ’
‘ಬುಡಕಟ್ಟು ಜನರು ಲಸಿಕೆ ಹಾಕಿಸಿಕೊಳ್ಳದೆ ಇರುವುದಕ್ಕೆ ಮುಖ್ಯ ಕಾರಣ ಮೂಢನಂಬಿಕೆ ಮತ್ತು ಅರಿವಿನ ಕೊರತೆ. ಇಂತಹ ಗ್ರಾಮಗಳಲ್ಲಿ ಜನಪ್ರತಿನಿಧಿಗಳು, ವಿದ್ಯಾವಂತರು, ಲಸಿಕೆ ಪಡೆದು ಜನರಿಗೆ ಅರಿವು ಮೂಡಿಸಬೇಕು. ಅಂಗನವಾಡಿ ಕಾರ್ಯಕರ್ತರು, ಪಂಚಾಯತಿ ಅಧಿಕಾರಿಗಳು ಮನೆಗಳಿಗೆ ತೆರಳಿ ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು. ಇವರ ಸಹಕಾರ ಇಲ್ಲದ ಕಾರಣ ಕೇವಲ ಆಶಾ ಕಾರ್ಯಕರ್ತೆಯರು ಲಸಿಕೆ ಹಾಕಿಸಿಕೊಳ್ಳುವಂತೆ ಮನೆಮನೆಗೆ ತೆರಳಿ ಹೇಳುತ್ತ ಇದ್ದಾರೆ. ನಮ್ಮ ಮಾತಿಗೆ ಕಿಮ್ಮತ್ತು ಇಲ್ಲದಂತಾಗಿದೆ’ ಎಂದು ಆಶಾ ಸಿಬ್ಬಂದಿ ಬೇಸರ ವ್ಯಕ್ತಪಡಿಸಿದರು.