ಗುಂಡ್ಲುಪೇಟೆ, ಕೊಳ್ಳೇಗಾಲ, ಹನೂರು ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಆಯಾ ತಾಲ್ಲೂಕುಗಳ ರೈತರ ನೋಂದಣಿ ಹಾಗೂ ಖರೀದಿ ಕೇಂದ್ರ ಪ್ರಾರಂಭವಾಗುತ್ತಿದೆ. ಚಾಮರಾಜನಗರ ಮತ್ತು ಯಳಂದೂರು ತಾಲ್ಲೂಕಿನ ರೈತರು ಚಾಮರಾಜನಗರದ ಸಂತೇಮರಹಳ್ಳಿ ವೃತ್ತದ ಬಳಿಯ ಆಕ್ಸಿಸ್ ಬ್ಯಾಂಕ್ ಹಿಂಭಾಗದ ಆಂಜನೇಯ ಸ್ವಾಮಿ ಫ್ಲೋರ್ ಹತ್ತಿರವಿರುವ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಖರೀದಿ ಕೇಂದ್ರವನ್ನು ಚಾಮರಾಜನಗರದ ಎಪಿಎಂಸಿ ಆವರಣದಲ್ಲಿ ತೆರೆಯಲಾಗುತ್ತದೆ.