ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು, ‘ಅರಣ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸರು, ಲೋಕೋಪಯೋಗಿ ಇಲಾಖೆ ಸೇರಿದಂತೆ ಸಂಬಂಧಿಸಿದ ಎಲ್ಲರಿಂದಲೂ ಅಭಿಪ್ರಾಯ ಪಡೆದು ಅನುಮತಿ ನೀಡಲಾಗಿದೆ. ಅರಣ್ಯ ಭಾಗದಲ್ಲಿ ಹೆಲಿಕಾಪ್ಟರ್ ಇಳಿದಿಲ್ಲ. ಹೆಲಿಪ್ಯಾಡ್ ಅನ್ನು ಕಂದಾಯ ಜಮೀನಿನಲ್ಲಿ ನಿರ್ಮಿಸಲಾಗಿದೆ’ ಎಂದು ಸ್ಪಷ್ಟಪಡಿಸಿದರು.