ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಜಿಂಕೆಯನ್ನು ಬೇಟೆಯಾಡಿ ಅದರ ಮಾಂಸವನ್ನು ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತರ ಬಳಿಯಿಂದ ಏಳು ಕೆಜಿಯಷ್ಟು ಜಿಂಕೆ ಮಾಂಸ, ಒಂದು ನಾಡ ಬಂದೂಕು ವಶಪಡಿಸಿಕೊಳ್ಳಲಾಗಿದೆ. ಚಾಮರಾಜನಗರ ತಾಲ್ಲೂಕಿನ ಮೂಕನಪಾಳ್ಯದ ನಿವಾಸಿಗಳಾದ ನಾಗರಾಜು ನಾಯ್ಕ (30), ಸಂಪತ್ ನಾಯ್ಕ (32) ಬಂಧಿತರು.
ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮೂಕನಪಾಳ್ಯ ಗ್ರಾಮದಲ್ಲಿ ಜಿಂಕೆ ಮಾಂಸವನ್ನು ಸಾಗಣೆ ಮಾಡುವಾಗ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ಅಧಿಕಾರಿ ಕಾಂತರಾಜು, ಉಪ ವಲಯ ಅರಣ್ಯ ಅಧಿಕಾರಿ ಕೃಷ್ಣಮೂರ್ತಿ, ಗಾರ್ಡ್ಗಳಾದ ಮಹೇಂದ್ರ, ನವೀನ್ ಕುಮಾರ್, ಅಯಾಜ್ ನೆರ್ಲಿ, ಮಹದೇವಪ್ಪ ಸಿ, ಸಿದ್ದರಾಮಣ್ಣ ಇದ್ದರು.