ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ: 3 ಕ್ಷೇತ್ರದಲ್ಲಿ ಬಾಜಿ ಕಟ್ಟಲು ಆಹ್ವಾನ, ಇಬ್ಬರ ಬಂಧನ

Published 12 ಮೇ 2023, 20:00 IST
Last Updated 12 ಮೇ 2023, 20:00 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಇಲ್ಲಿನ ಬಸ್ತೀಪುರ ಬಡಾವಣೆಯಲ್ಲಿ ತಮ್ಮ ಇಷ್ಟದ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಲಕ್ಷಾಂತರ ರೂಪಾಯಿ ಹಣವನ್ನು ಹಿಡಿದುಕೊಂಡು ಬಾಜಿಗೆ ಆಹ್ವಾನಿಸಿದ್ದ ಇಬ್ಬರನ್ನು ನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬಡಾವಣೆಯ ನಿವಾಸಿ ಮಲ್ಲೇಶ್ ಹಾಗೂ ವಿಡಿಯೊ ಮಾಡಿದ್ದ ರಾಜು ಎಂಬುವರು ಬಂಧಿತರು.

ಮಲ್ಲೇಶ್ ತರಕಾರಿ ವ್ಯಾಪಾರಿಯಾಗಿದ್ದು ₹ 8 ಲಕ್ಷ ಹಣದ ಕಟ್ಟು‌ ಹಿಡಿದುಕೊಂಡು ಪಂಥಕ್ಕೆ ಆಹ್ವಾನಿಸಿದ್ದರು.

‘ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ₹ 3 ಲಕ್ಷ, ಹನೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಮಂಜುನಾಥ್ ಪರವಾಗಿ ₹ 3 ಲಕ್ಷ ಹಾಗೂ ಕೊಳ್ಳೇಗಾಲದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಪರವಾಗಿ‌ ₹ 2 ಲಕ್ಷ ಹಣ ಕಟ್ಟುತ್ತೇನೆ, ಬನ್ನಿ ಬಾಜಿ ಕಟ್ಟಿ’ ಎಂದು ಮಲ್ಲೇಶ್ ಆಹ್ವಾನಿಸಿದ್ದರು.

ಚುನಾವಣಾ ಅಧಿಕಾರಿಗಳ ಮೌಖಿಕ ಸೂಚನೆ ಮೇರೆಗೆ ಠಾಣೆ ಪೊಲೀಸರು ಜೂಜಾಟಕ್ಕೆ ಪ್ರಚೋದನೆ ನೀಡಿದ್ದಾರೆಂದು ಇಬ್ಬರನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT