<p><strong>ಚಾಮರಾಜನಗರ: </strong>ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಶನಿವಾರವೂ ಇಬ್ಬರು ಮೃತಪಟ್ಟಿದ್ದಾರೆ. 65 ಹೊಸ ಪ್ರಕರಣಗಳು ದೃಢಪಟ್ಟಿವೆ. 62 ಮಂದಿ ಗುಣಮುಖರಾಗಿದ್ದಾರೆ.</p>.<p>ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿಯ 75 ವರ್ಷದ ವೃದ್ಧ ಅ.10ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಹರವೆ ಗ್ರಾಮದ 62 ವರ್ಷದ ಮಹಿಳೆ ಅ.10 ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಕೊನೆಯುಸಿರೆಳೆದಿದ್ದಾರೆ.</p>.<p>ಮೂರು ದಿನಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಕೋವಿಡ್ನಿಂದಾಗಿ ಮೃತಪಟ್ಟವರ ಸಂಖ್ಯೆ 84ಕ್ಕೆ ಏರಿದೆ. ಕೋವಿಡ್ಯೇತರ ಕಾರಣದಿಂದ 30 ಮಂದಿ ಕೊನೆಯುಸಿರೆಳೆದಿದ್ದಾರೆ.</p>.<p>ಶನಿವಾರದ 65 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 5,390 ಪ್ರಕರಣಗಳು ದೃಢಪಟ್ಟಿವೆ. 4,480 ಮಂದಿ ಗುಣಮುಖರಾಗಿದ್ದಾರೆ. 796 ಮಂದಿ ಸೋಂಕುನಿಂದ ಬಳಲುತ್ತಿದ್ದಾರೆ. ಈ ಪೈಕಿ 227 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಐಸಿಯುನಲ್ಲಿ 46 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಶನಿವಾರ 993 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 929 ಮಂದಿಯ ನೆಗೆಟಿವ್ ಬಂದಿವೆ. 64 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಶನಿವಾರವೂ ಇಬ್ಬರು ಮೃತಪಟ್ಟಿದ್ದಾರೆ. 65 ಹೊಸ ಪ್ರಕರಣಗಳು ದೃಢಪಟ್ಟಿವೆ. 62 ಮಂದಿ ಗುಣಮುಖರಾಗಿದ್ದಾರೆ.</p>.<p>ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿಯ 75 ವರ್ಷದ ವೃದ್ಧ ಅ.10ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಹರವೆ ಗ್ರಾಮದ 62 ವರ್ಷದ ಮಹಿಳೆ ಅ.10 ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಕೊನೆಯುಸಿರೆಳೆದಿದ್ದಾರೆ.</p>.<p>ಮೂರು ದಿನಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಕೋವಿಡ್ನಿಂದಾಗಿ ಮೃತಪಟ್ಟವರ ಸಂಖ್ಯೆ 84ಕ್ಕೆ ಏರಿದೆ. ಕೋವಿಡ್ಯೇತರ ಕಾರಣದಿಂದ 30 ಮಂದಿ ಕೊನೆಯುಸಿರೆಳೆದಿದ್ದಾರೆ.</p>.<p>ಶನಿವಾರದ 65 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 5,390 ಪ್ರಕರಣಗಳು ದೃಢಪಟ್ಟಿವೆ. 4,480 ಮಂದಿ ಗುಣಮುಖರಾಗಿದ್ದಾರೆ. 796 ಮಂದಿ ಸೋಂಕುನಿಂದ ಬಳಲುತ್ತಿದ್ದಾರೆ. ಈ ಪೈಕಿ 227 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಐಸಿಯುನಲ್ಲಿ 46 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಶನಿವಾರ 993 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 929 ಮಂದಿಯ ನೆಗೆಟಿವ್ ಬಂದಿವೆ. 64 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>