ಮಾರ್ಚ್ 30ರಂದು ಕೊಂಗಮಡುಹಳ್ಳ ಅರಣ್ಯ ಪ್ರದೇಶದ ಕಾವೇರಿ ನದಿಯಲ್ಲಿ ಮತ್ತೊಂದು ಹೆಣ್ಣಾನೆ ಮೃತದೇಹ ಪತ್ತೆಯಾಗಿದೆ. ನೀರು ಕುಡಿಯಲು ಬಂದ ಆನೆ ನದಿ ದಡದಲ್ಲಿ ಬಂಡೆಗಳ ಮೇಲೆ ನಡೆದಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ. ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆ ಬಳಿಕ ಅರಣ್ಯದೊಳಗೆ ಸುಡಲಾಯಿತು.