ಎರಡೂ ಪ್ರಕರಣಗಳ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವಮಲೆಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕುಂಡಲು, ‘ಹೆಣ್ಣಾನೆಯು ನೀರು ಕುಡಿಯಲು ಹೋಗಿ ಸತ್ತಿದೆ. ಇದರ ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು, ಆನೆಯು ಮೇಲಿಂದ ಕೆಳಕ್ಕೆ ಬಿದ್ದ ಕಾರಣ ಬಲವಾಗಿ ಪೆಟ್ಟಾಗಿದ್ದರಿಂದ ಸಾವಿಗೀಡಾಗಿದೆ ಎಂಬುದು ದೃಢಪಟ್ಟಿದೆ. ಗಂಡಾನೆಯು 20 ದಿನಗಳ ಹಿಂದೆಯೇ ಮೃತಪಟ್ಟಿದೆ. ಇದು ಸಹಜ ಸಾವು ಎಂಬುದು ಮರಣೋತ್ತರ ಪರೀಕ್ಷೆಯಿಂದ ತಿಳಿದು ಬಂದಿದೆ’ ಎಂದು ಹೇಳಿದರು.