ಗುಂಡ್ಲುಪೇಟೆ: ಅರಣ್ಯ ಸಂರಕ್ಷಣೆ ಕಾರ್ಯದಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಇಲಾಖೆಯ ಮುಂಚೂಣಿ ಕಾರ್ಯಕರ್ತರಿಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಪ್ರತಿ ವರ್ಷ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಬಂಡೀಪುರ ಹಾಗೂ ಕಾಳಿ ಹುಲಿ ಸಂರಕ್ಷಿತ ಪ್ರದೇಶಗಳ ತಲಾ ಒಬ್ಬರು ಸಿಬ್ಬಂದಿ ಆಯ್ಕೆಯಾಗಿದ್ದಾರೆ.