ಜಮೀನಿನಲ್ಲಿ ಸಿಕ್ಕ ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುವುದಾಗಿ ಆರೋಪಿಗಳು ಹೇಳುತ್ತಿದ್ದಾರೆ. ಹಾವನ್ನು ಕಾಡಿಗೆ ಬಿಡುವುದಿದ್ದರೆ ಗ್ರಾಮಕ್ಕೆ ತೆಗೆದುಕೊಂಡು ಏಕೆ ಹೋಗಬೇಕಿತ್ತು. ಜಮೀನಿನಲ್ಲಿ ಹಾವು ಕಂಡು ಬಂದ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಬಹುದಿತ್ತು. ಆದರೆ ಆರೋಪಿಗಳು ಹಾವನ್ನು ಮಾರಾಟ ಮಾಡುವುದಕ್ಕಾಗಿಯೇ ಅದನ್ನು ತೆಗೆದುಕೊಂಡು ಬಸ್ ನಿಲ್ದಾಣದಲ್ಲಿ ನಿಂತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.