<p><strong>ಚಾಮರಾಜನಗರ: </strong>ನಗರದ ನಂಜನಗೂಡು ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆಗೆ ಜಲ್ಲಿ ತುಂಬಿದ್ದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.</p>.<p>ಚಾಲಕ, ಹನೂರು ತಾಲ್ಲೂಕಿನ ಚಿಂಚಹಳ್ಳಿ ಗ್ರಾಮದ ಸುದೇಶ್ (30) ಹಾಗೂ ಟಿಪ್ಪರ್ ಮಾಲೀಕ ಹನೂರಿನ ಆರ್.ಎಸ್.ದೊಡ್ಡಿಯ ಮಹದೇವಪ್ಪ ಅವರ ಮಗ ಲೋಕೇಶ್ (23) ಮೃತಪಟ್ಟವರು.</p>.<p>ರಸ್ತೆ ನಿರ್ಮಾಣಕ್ಕಾಗಿ ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಜಲ್ಲಿ ತುಂಬಿಕೊಂಡಿದ್ದ ಟಿಪ್ಪರ್, ನಗರದ ಮೂಡ್ಲುಪುರ ಬಡಾವಣೆಯಿಂದ ಆರಂಭವಾಗುವ ಬೈಪಾಸ್ ರಸ್ತೆ ಮೂಲಕ ನಂಜನಗೂಡು ಮುಖ್ಯರಸ್ತೆ ಮಾರ್ಗದಲ್ಲಿ ಹನೂರಿಗೆ ತೆರಳುತ್ತಿತ್ತು.</p>.<p>ಈ ವೇಳೆ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು, ಮೇಲ್ಸೇತುವೆ ಗೋಡೆಗೆ ಡಿಕ್ಕಿ ಹೊಡೆಯಿತು. ಟಿಪ್ಪರ್ ನ ಮುಂಭಾಗ ನಜ್ಜು ಗುಜ್ಜಾಗಿದ್ದು, ಅದರಲ್ಲಿದ್ದ ಸುದೇಶ್ ಹಾಗೂ ಲೋಕೇಶ್ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.</p>.<p>ಸ್ಥಳಕ್ಕೆ ಸಂಚಾರ ಠಾಣೆ ಸಬ್ ಇನ್ ಸ್ಪೆಕ್ಟರ್ ನಂದೀಶ್ ಕುಮಾರ್, ಪಟ್ಟಣ ಠಾಣೆ ಇನ್ ಸ್ಪೆಕ್ಟರ್ ಮಹೇಶ್ ಅವರು ಭೇಟಿ ನೀಡಿ ಪರಿಶೀಲಿಸಿದರು.</p>.<p>ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ನಗರದ ನಂಜನಗೂಡು ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆಗೆ ಜಲ್ಲಿ ತುಂಬಿದ್ದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.</p>.<p>ಚಾಲಕ, ಹನೂರು ತಾಲ್ಲೂಕಿನ ಚಿಂಚಹಳ್ಳಿ ಗ್ರಾಮದ ಸುದೇಶ್ (30) ಹಾಗೂ ಟಿಪ್ಪರ್ ಮಾಲೀಕ ಹನೂರಿನ ಆರ್.ಎಸ್.ದೊಡ್ಡಿಯ ಮಹದೇವಪ್ಪ ಅವರ ಮಗ ಲೋಕೇಶ್ (23) ಮೃತಪಟ್ಟವರು.</p>.<p>ರಸ್ತೆ ನಿರ್ಮಾಣಕ್ಕಾಗಿ ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಜಲ್ಲಿ ತುಂಬಿಕೊಂಡಿದ್ದ ಟಿಪ್ಪರ್, ನಗರದ ಮೂಡ್ಲುಪುರ ಬಡಾವಣೆಯಿಂದ ಆರಂಭವಾಗುವ ಬೈಪಾಸ್ ರಸ್ತೆ ಮೂಲಕ ನಂಜನಗೂಡು ಮುಖ್ಯರಸ್ತೆ ಮಾರ್ಗದಲ್ಲಿ ಹನೂರಿಗೆ ತೆರಳುತ್ತಿತ್ತು.</p>.<p>ಈ ವೇಳೆ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು, ಮೇಲ್ಸೇತುವೆ ಗೋಡೆಗೆ ಡಿಕ್ಕಿ ಹೊಡೆಯಿತು. ಟಿಪ್ಪರ್ ನ ಮುಂಭಾಗ ನಜ್ಜು ಗುಜ್ಜಾಗಿದ್ದು, ಅದರಲ್ಲಿದ್ದ ಸುದೇಶ್ ಹಾಗೂ ಲೋಕೇಶ್ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.</p>.<p>ಸ್ಥಳಕ್ಕೆ ಸಂಚಾರ ಠಾಣೆ ಸಬ್ ಇನ್ ಸ್ಪೆಕ್ಟರ್ ನಂದೀಶ್ ಕುಮಾರ್, ಪಟ್ಟಣ ಠಾಣೆ ಇನ್ ಸ್ಪೆಕ್ಟರ್ ಮಹೇಶ್ ಅವರು ಭೇಟಿ ನೀಡಿ ಪರಿಶೀಲಿಸಿದರು.</p>.<p>ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>